Latest

ಅಕ್ರಮ ಪಡಿತರ ಅಕ್ಕಿ ಸಾಗಾಟ ತಡೆ: ಕೊಳ್ಳೇಗಾಲದಲ್ಲಿ ಲಾರಿ ವಶ

ಕೊಳ್ಳೇಗಾಲ, ಮೇ 4 – ಪಟ್ಟಣದ ಹತ್ತಿರದ ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಅಕ್ರಮವಾಗಿ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಸುಮಾರು 30 ಟನ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದಿದ್ದಾರೆ.

ಅಹರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರೀಕ್ಷಕ ಎಂ.ಎನ್. ಪ್ರಸಾದ್ ಅವರಿಗೆ ಲಾರಿಗೆ ಅಕ್ಕಿ ತುಂಬಿ ಕಳತೆ ಮಾರ್ಗವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಅವರು ಪಟ್ಟಣ ಠಾಣೆ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿದರು.

ಅಶೋಕ್ ಲೈಲ್ಯಾಂಡ್ ಲಾರಿ ಗ್ರಾಮಾಂತರ ಠಾಣೆ ಎದುರುಗಡೆಯಿಂದ ಬರುವ ವೇಳೆ ತಡೆದ ಅಧಿಕಾರಿಗಳನ್ನು ನೋಡಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿಯ ಪರಿಶೀಲನೆಯ ವೇಳೆ 550 ಕ್ಕೂ ಹೆಚ್ಚು ಚೀಲಗಳಲ್ಲಿ ಪಡಿತರ ಅಕ್ಕಿ ತುಂಬಲಾಗಿದ್ದು, ಚೀಲಗಳ ಮೇಲೆ “ಮಹದೇವ ರೈಸ್ ಮಿಲ್” ಮತ್ತು “ಶಿವಶಂಕರ್ ರೈಸ್ ಮಿಲ್” ಎಂಬ ಟ್ಯಾಗ್ ಅಂಟಿಸಲಾಗಿದೆ.

ಪೂರ್ವ ತನಿಖೆಯ ಪ್ರಕಾರ ಲಾರಿಯನ್ನು ಶಿಗ್ಗಾಂವಿಯಿಂದ ಟಿ. ನರಸೀಪುರ, ಕೊಳ್ಳೇಗಾಲ, ರಾಮಾಪುರ ಮಾರ್ಗವಾಗಿ ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು. ಕಾಳಸಂತೆಯ ದಂಧೆಕೋರರು ಗ್ರಾಮೀಣ ಪ್ರದೇಶದ ಅನ್ನಭಾಗ್ಯ ಫಲಾನುಭವಿಗಳಿಂದ ಕಡಿಮೆ ದರದಲ್ಲಿ ಅಕ್ಕಿ ಖರೀದಿ ಮಾಡಿ, ಒಂದೆಡೆ ಸಂಗ್ರಹಿಸಿ ನಂತರ ಹೊರ ರಾಜ್ಯಗಳಿಗೆ ಸಾಗಿಸುತ್ತಿರುವ ಮಾದರಿ ಇದು.

ದಾಳಿಯಲ್ಲಿ ಪಟ್ಟಣ ಠಾಣೆಯ ಉಪನಿರೀಕ್ಷಕ ಸುಪ್ರೀತ್, ಎಎಸ್‌ಐ ಮಧುಕುಮಾರ್, ಮುಖ್ಯ ಪೇದೆ ಸೂರ್ಯಪ್ರಕಾಶ್, ಪೇದೆಗಳು ಸಚಿನ್, ಅನಿಲ್ ಮತ್ತು ಲಾರಿ ಚಾಲಕ ನಂಜುಂಡಸ್ವಾಮಿ ಪಾಲ್ಗೊಂಡಿದ್ದರು. ಈ ಕುರಿತು ಆಹಾರ ನಿರೀಕ್ಷಕ ಪ್ರಸಾದ್ ಅವರು ಪಟ್ಟಣ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

55 minutes ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago