ಅಥಣಿ: ಅಥಣಿ ತಾಲೂಕಿನ ಗಡಿಭಾಗಗಳಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟವಾಗುತ್ತಿದೆ. ರೇಶನ್ ಶುರುವಾದ್ರೆ ಸಾಕು ದಂಧೆಕೋರರು ಫುಲ್ ಆ್ಯಕ್ಟಿವ್ ಆಗಿ ಬಡವರ ಅಕ್ಕಿಯನ್ನು ಪಕ್ಕದ ಮಹಾರಾಷ್ಟ್ರದ ಪಾಲು ಮಾಡುತ್ತಿದ್ದಾರೆ. ಈ ದಂಧೆಯನ್ನು ತಡೆಯಬೇಕಿದ್ದ ಪೋಲಿಸ್ ಇಲಾಖೆ ವಿಫಲವಾಗಿದ್ದರಿಂದ ಸ್ಥಳೀಯರೇ ಸಾಗಾಟ ವಾಹನ ತಡೆದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ, ಕೋಹಳ್ಳಿ ಜಂಬಗಿ ಮಾರ್ಗವಾಗಿ ಕಾಳ ಸಂತೆಗೆ ಅನ್ನಭಾಗ್ಯದ ಅಕ್ಕಿಯನ್ನು ಬಡವರಿಂದ ಕಡಿಮೆ ಹಣಕ್ಕೆ ಖರೀದಿ ಮಾಡಿ ಮಹಾರಾಷ್ಟ್ರಕ್ಕೆ ರವಾನೆ ಮಾಡುತ್ತಿದ್ದಾರೆ ಈ ಕಳ್ಳರು.
ಬಡವರಿಂದ ಖರೀದಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಪಕ್ಕದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುವ ಜಾಲ ತಾಲೂಕಿನಲ್ಲಿ ಸಕ್ರೀಯವಾಗಿದೆ, ಈ ಜಾಲನೋಡಿ ಬೇಸತ್ತ ಸ್ಥಳೀಯರೇ ಖುದ್ದಾಗಿ ಅಕ್ರಮ ಸಾಗಾಟನೆಯನ್ನು ತಡೆದು ಪ್ರಶ್ನೆ ಮಾಡಿದ ವಿಡಿಯೋ ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ಲಾಗುತ್ತಿವೆ.
ನಿರಂತರವಾಗಿ ಗಡಿ ಭಾಗದಲ್ಲಿ ರಾಜಾ ರೋಷವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟವಾಗುತ್ತಿದ್ದರೂ ಕೂಡ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಅಥಣಿ ಹಾಗೂ ಐಗಳಿ ಪೋಲಿಸ್ ಠಾಣೆಯ ಪೋಲಿಸರು ಕಣ್ಣು ಮುಚ್ಚಿ ಕುಳಿತಿದ್ದಾರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…