ಅಥಣಿ: ಅಥಣಿ ತಾಲೂಕಿನ ಗಡಿಭಾಗಗಳಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟವಾಗುತ್ತಿದೆ. ರೇಶನ್ ಶುರುವಾದ್ರೆ ಸಾಕು ದಂಧೆಕೋರರು ಫುಲ್ ಆ್ಯಕ್ಟಿವ್ ಆಗಿ ಬಡವರ ಅಕ್ಕಿಯನ್ನು ಪಕ್ಕದ ಮಹಾರಾಷ್ಟ್ರದ ಪಾಲು ಮಾಡುತ್ತಿದ್ದಾರೆ. ಈ ದಂಧೆಯನ್ನು ತಡೆಯಬೇಕಿದ್ದ ಪೋಲಿಸ್ ಇಲಾಖೆ ವಿಫಲವಾಗಿದ್ದರಿಂದ ಸ್ಥಳೀಯರೇ ಸಾಗಾಟ ವಾಹನ ತಡೆದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ, ಕೋಹಳ್ಳಿ ಜಂಬಗಿ ಮಾರ್ಗವಾಗಿ ಕಾಳ ಸಂತೆಗೆ ಅನ್ನಭಾಗ್ಯದ ಅಕ್ಕಿಯನ್ನು ಬಡವರಿಂದ ಕಡಿಮೆ ಹಣಕ್ಕೆ ಖರೀದಿ ಮಾಡಿ ಮಹಾರಾಷ್ಟ್ರಕ್ಕೆ ರವಾನೆ ಮಾಡುತ್ತಿದ್ದಾರೆ ಈ ಕಳ್ಳರು.
ಬಡವರಿಂದ ಖರೀದಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಪಕ್ಕದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುವ ಜಾಲ ತಾಲೂಕಿನಲ್ಲಿ ಸಕ್ರೀಯವಾಗಿದೆ, ಈ ಜಾಲನೋಡಿ ಬೇಸತ್ತ ಸ್ಥಳೀಯರೇ ಖುದ್ದಾಗಿ ಅಕ್ರಮ ಸಾಗಾಟನೆಯನ್ನು ತಡೆದು ಪ್ರಶ್ನೆ ಮಾಡಿದ ವಿಡಿಯೋ ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ಲಾಗುತ್ತಿವೆ.
ನಿರಂತರವಾಗಿ ಗಡಿ ಭಾಗದಲ್ಲಿ ರಾಜಾ ರೋಷವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟವಾಗುತ್ತಿದ್ದರೂ ಕೂಡ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಅಥಣಿ ಹಾಗೂ ಐಗಳಿ ಪೋಲಿಸ್ ಠಾಣೆಯ ಪೋಲಿಸರು ಕಣ್ಣು ಮುಚ್ಚಿ ಕುಳಿತಿದ್ದಾರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…