ಅಥಣಿ: ಅಥಣಿ ತಾಲೂಕಿನ ಗಡಿಭಾಗಗಳಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟವಾಗುತ್ತಿದೆ. ರೇಶನ್ ಶುರುವಾದ್ರೆ ಸಾಕು ದಂಧೆಕೋರರು ಫುಲ್ ಆ್ಯಕ್ಟಿವ್ ಆಗಿ ಬಡವರ ಅಕ್ಕಿಯನ್ನು ಪಕ್ಕದ ಮಹಾರಾಷ್ಟ್ರದ ಪಾಲು ಮಾಡುತ್ತಿದ್ದಾರೆ. ಈ ದಂಧೆಯನ್ನು ತಡೆಯಬೇಕಿದ್ದ ಪೋಲಿಸ್ ಇಲಾಖೆ ವಿಫಲವಾಗಿದ್ದರಿಂದ ಸ್ಥಳೀಯರೇ ಸಾಗಾಟ ವಾಹನ ತಡೆದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ, ಕೋಹಳ್ಳಿ ಜಂಬಗಿ ಮಾರ್ಗವಾಗಿ ಕಾಳ ಸಂತೆಗೆ ಅನ್ನಭಾಗ್ಯದ ಅಕ್ಕಿಯನ್ನು ಬಡವರಿಂದ ಕಡಿಮೆ ಹಣಕ್ಕೆ ಖರೀದಿ ಮಾಡಿ ಮಹಾರಾಷ್ಟ್ರಕ್ಕೆ ರವಾನೆ ಮಾಡುತ್ತಿದ್ದಾರೆ ಈ ಕಳ್ಳರು.
ಬಡವರಿಂದ ಖರೀದಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಪಕ್ಕದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುವ ಜಾಲ ತಾಲೂಕಿನಲ್ಲಿ ಸಕ್ರೀಯವಾಗಿದೆ, ಈ ಜಾಲನೋಡಿ ಬೇಸತ್ತ ಸ್ಥಳೀಯರೇ ಖುದ್ದಾಗಿ ಅಕ್ರಮ ಸಾಗಾಟನೆಯನ್ನು ತಡೆದು ಪ್ರಶ್ನೆ ಮಾಡಿದ ವಿಡಿಯೋ ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ಲಾಗುತ್ತಿವೆ.
ನಿರಂತರವಾಗಿ ಗಡಿ ಭಾಗದಲ್ಲಿ ರಾಜಾ ರೋಷವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟವಾಗುತ್ತಿದ್ದರೂ ಕೂಡ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಅಥಣಿ ಹಾಗೂ ಐಗಳಿ ಪೋಲಿಸ್ ಠಾಣೆಯ ಪೋಲಿಸರು ಕಣ್ಣು ಮುಚ್ಚಿ ಕುಳಿತಿದ್ದಾರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…