Latest

ರೊಸಾರಿಯೊ ಕಾಲೇಜು ಹಿಂಭಾಗದ ಗೋದಾಮಿನಲ್ಲಿ ಅಕ್ರಮ ಅಕ್ಕಿ ದಾಸ್ತಾನು ಬಯಲು: 500 ಕ್ವಿಂಟಲ್ ಅಕ್ಕಿ ವಶ

ಮಂಗಳೂರು ರೊಸಾರಿಯೊ ಕಾಲೇಜಿನ ಹಿಂಭಾಗದಲ್ಲಿರುವ ಖಾಸಗಿ ಗೋದಾಮೊಂದರಲ್ಲಿ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು ಮಾಡಲಾಗುತ್ತಿದ್ದ ಬೆಳಕಿಗೆ ಬಂದಿದೆ. ಸಾರ್ವಜನಿಕರಿಂದ ಬಂದ ದೂರು ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಈ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಸೋಮವಾರ ನಡೆಸಿದ ಈ ದಾಳಿಗೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರು ನೇತೃತ್ವವಹಿಸಿದ್ದರು. ‘ಅನುಪಮಾ ಎಂಟರ್‌ಪ್ರೈಸಸ್‌’ ಸಂಸ್ಥೆಗೆ ಸೇರಿದ ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ಮತ್ತು ಕುಚ್ಚಲಕ್ಕಿ ಸೇರಿದಂತೆ ವಿವಿಧ ಬ್ರ್ಯಾಂಡ್‌ಗಳ ಅಕ್ಕಿ ಚೀಲಗಳು ಪತ್ತೆಯಾದವು. ಇವುಗಳ ಜೊತೆಗೆ ಯಾವುದೇ ಲೇಬಲ್ ಇಲ್ಲದ ಬಿಳಿ ಚೀಲಗಳಲ್ಲಿಯೂ ಅಕ್ಕಿ ಸೆರೆಯಾಗಿದೆ.

“ಈ ಅಕ್ಕಿಯ ನಡುವೆ ಪಡಿತರ ಅಕ್ಕಿಯೂ ಇರಬಹುದು ಎಂಬ ಶಂಕೆ ಇದ್ದು, ಎಲ್ಲಾ ಅಕ್ಕಿಯನ್ನು ವಶಕ್ಕೆ ಪಡೆದು ಅಗತ್ಯವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ಅನಿತಾ ಮಡ್ಲೂರು ತಿಳಿಸಿದರು.

ಉತ್ತರ ಕರ್ನಾಟಕದಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ತರಿಸಿ ಪಾಲಿಶ್ ಮಾಡಿ, ಬೇರೆ ಬ್ರ್ಯಾಂಡ್ ಅಡಿಯಲ್ಲಿ ಮಾರುಕಟ್ಟೆಗೆ ಬಿಟ್ಟಿರುವ ಬಗ್ಗೆ ಇಲಾಖೆ ಕೆಲವೇ ದಿನಗಳ ಹಿಂದೆ ದೂರುಗಳನ್ನೂ ಪಡೆದಿತ್ತು. ಈ ಹಿನ್ನೆಲೆಯಲ್ಲಿ ವಶಪಡಿಸಿದ ಅಕ್ಕಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಫಲಿತಾಂಶದ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಇದೇ ವೇಳೆ, ಇಷ್ಟು ಹೆಚ್ಚಿನ ಪ್ರಮಾಣದ ಅಕ್ಕಿ ದಾಸ್ತಾನು ಮಾಡಲು ಗೋದಾಮಿನವರು ಅಗತ್ಯ ಅನುಮತಿ ಪಡೆದಿದ್ದಾರೇ ಎಂಬುದನ್ನೂ ತನಿಖೆ ಮಾಡಲಾಗುತ್ತಿದೆ.

ಈ ದಾಳಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ಬೆಳಕಿಗೆ ತಂದಿದ್ದು, ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

12 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago