ಮಂಗಳೂರು ರೊಸಾರಿಯೊ ಕಾಲೇಜಿನ ಹಿಂಭಾಗದಲ್ಲಿರುವ ಖಾಸಗಿ ಗೋದಾಮೊಂದರಲ್ಲಿ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು ಮಾಡಲಾಗುತ್ತಿದ್ದ ಬೆಳಕಿಗೆ ಬಂದಿದೆ. ಸಾರ್ವಜನಿಕರಿಂದ ಬಂದ ದೂರು ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಈ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಸೋಮವಾರ ನಡೆಸಿದ ಈ ದಾಳಿಗೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರು ನೇತೃತ್ವವಹಿಸಿದ್ದರು. ‘ಅನುಪಮಾ ಎಂಟರ್ಪ್ರೈಸಸ್’ ಸಂಸ್ಥೆಗೆ ಸೇರಿದ ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ಮತ್ತು ಕುಚ್ಚಲಕ್ಕಿ ಸೇರಿದಂತೆ ವಿವಿಧ ಬ್ರ್ಯಾಂಡ್ಗಳ ಅಕ್ಕಿ ಚೀಲಗಳು ಪತ್ತೆಯಾದವು. ಇವುಗಳ ಜೊತೆಗೆ ಯಾವುದೇ ಲೇಬಲ್ ಇಲ್ಲದ ಬಿಳಿ ಚೀಲಗಳಲ್ಲಿಯೂ ಅಕ್ಕಿ ಸೆರೆಯಾಗಿದೆ.
“ಈ ಅಕ್ಕಿಯ ನಡುವೆ ಪಡಿತರ ಅಕ್ಕಿಯೂ ಇರಬಹುದು ಎಂಬ ಶಂಕೆ ಇದ್ದು, ಎಲ್ಲಾ ಅಕ್ಕಿಯನ್ನು ವಶಕ್ಕೆ ಪಡೆದು ಅಗತ್ಯವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ಅನಿತಾ ಮಡ್ಲೂರು ತಿಳಿಸಿದರು.
ಉತ್ತರ ಕರ್ನಾಟಕದಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ತರಿಸಿ ಪಾಲಿಶ್ ಮಾಡಿ, ಬೇರೆ ಬ್ರ್ಯಾಂಡ್ ಅಡಿಯಲ್ಲಿ ಮಾರುಕಟ್ಟೆಗೆ ಬಿಟ್ಟಿರುವ ಬಗ್ಗೆ ಇಲಾಖೆ ಕೆಲವೇ ದಿನಗಳ ಹಿಂದೆ ದೂರುಗಳನ್ನೂ ಪಡೆದಿತ್ತು. ಈ ಹಿನ್ನೆಲೆಯಲ್ಲಿ ವಶಪಡಿಸಿದ ಅಕ್ಕಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಫಲಿತಾಂಶದ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಇದೇ ವೇಳೆ, ಇಷ್ಟು ಹೆಚ್ಚಿನ ಪ್ರಮಾಣದ ಅಕ್ಕಿ ದಾಸ್ತಾನು ಮಾಡಲು ಗೋದಾಮಿನವರು ಅಗತ್ಯ ಅನುಮತಿ ಪಡೆದಿದ್ದಾರೇ ಎಂಬುದನ್ನೂ ತನಿಖೆ ಮಾಡಲಾಗುತ್ತಿದೆ.
ಈ ದಾಳಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ಬೆಳಕಿಗೆ ತಂದಿದ್ದು, ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…