Latest

ರೊಸಾರಿಯೊ ಕಾಲೇಜು ಹಿಂಭಾಗದ ಗೋದಾಮಿನಲ್ಲಿ ಅಕ್ರಮ ಅಕ್ಕಿ ದಾಸ್ತಾನು ಬಯಲು: 500 ಕ್ವಿಂಟಲ್ ಅಕ್ಕಿ ವಶ

ಮಂಗಳೂರು ರೊಸಾರಿಯೊ ಕಾಲೇಜಿನ ಹಿಂಭಾಗದಲ್ಲಿರುವ ಖಾಸಗಿ ಗೋದಾಮೊಂದರಲ್ಲಿ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು ಮಾಡಲಾಗುತ್ತಿದ್ದ ಬೆಳಕಿಗೆ ಬಂದಿದೆ. ಸಾರ್ವಜನಿಕರಿಂದ ಬಂದ ದೂರು ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಈ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಸೋಮವಾರ ನಡೆಸಿದ ಈ ದಾಳಿಗೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರು ನೇತೃತ್ವವಹಿಸಿದ್ದರು. ‘ಅನುಪಮಾ ಎಂಟರ್‌ಪ್ರೈಸಸ್‌’ ಸಂಸ್ಥೆಗೆ ಸೇರಿದ ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ಮತ್ತು ಕುಚ್ಚಲಕ್ಕಿ ಸೇರಿದಂತೆ ವಿವಿಧ ಬ್ರ್ಯಾಂಡ್‌ಗಳ ಅಕ್ಕಿ ಚೀಲಗಳು ಪತ್ತೆಯಾದವು. ಇವುಗಳ ಜೊತೆಗೆ ಯಾವುದೇ ಲೇಬಲ್ ಇಲ್ಲದ ಬಿಳಿ ಚೀಲಗಳಲ್ಲಿಯೂ ಅಕ್ಕಿ ಸೆರೆಯಾಗಿದೆ.

“ಈ ಅಕ್ಕಿಯ ನಡುವೆ ಪಡಿತರ ಅಕ್ಕಿಯೂ ಇರಬಹುದು ಎಂಬ ಶಂಕೆ ಇದ್ದು, ಎಲ್ಲಾ ಅಕ್ಕಿಯನ್ನು ವಶಕ್ಕೆ ಪಡೆದು ಅಗತ್ಯವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ಅನಿತಾ ಮಡ್ಲೂರು ತಿಳಿಸಿದರು.

ಉತ್ತರ ಕರ್ನಾಟಕದಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ತರಿಸಿ ಪಾಲಿಶ್ ಮಾಡಿ, ಬೇರೆ ಬ್ರ್ಯಾಂಡ್ ಅಡಿಯಲ್ಲಿ ಮಾರುಕಟ್ಟೆಗೆ ಬಿಟ್ಟಿರುವ ಬಗ್ಗೆ ಇಲಾಖೆ ಕೆಲವೇ ದಿನಗಳ ಹಿಂದೆ ದೂರುಗಳನ್ನೂ ಪಡೆದಿತ್ತು. ಈ ಹಿನ್ನೆಲೆಯಲ್ಲಿ ವಶಪಡಿಸಿದ ಅಕ್ಕಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಫಲಿತಾಂಶದ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಇದೇ ವೇಳೆ, ಇಷ್ಟು ಹೆಚ್ಚಿನ ಪ್ರಮಾಣದ ಅಕ್ಕಿ ದಾಸ್ತಾನು ಮಾಡಲು ಗೋದಾಮಿನವರು ಅಗತ್ಯ ಅನುಮತಿ ಪಡೆದಿದ್ದಾರೇ ಎಂಬುದನ್ನೂ ತನಿಖೆ ಮಾಡಲಾಗುತ್ತಿದೆ.

ಈ ದಾಳಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ಬೆಳಕಿಗೆ ತಂದಿದ್ದು, ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

16 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

16 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago