ಬಳ್ಳಾರಿ ಜಿಲ್ಲೆ: ಸಿರಿಗೇರಿ ಗ್ರಾಮದಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕುರುಗೋಡು ಕಡೆಗೆ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ದೊಡ್ಡ ಪ್ರಮಾಣದ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.
ಆಹಾರ ಇಲಾಖೆ ಸಿಬ್ಬಂದಿ ಹಾಗೂ ಸಿರಿಗೇರಿ ಪೊಲೀಸರು ಭಾನುವಾರ ಜಂಟಿಯಾಗಿ ದಾಳಿ ನಡೆಸಿದ್ದು, ಆಟೋವೊಂದರಲ್ಲಿ ಸಾಗಿಸುತ್ತಿದ್ದ 60 ಚೀಲಗಳಲ್ಲಿ ಒಟ್ಟು 30 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪತ್ತೆ ಹಚ್ಚಿದ್ದಾರೆ. ಅಕ್ಕಿಯ ಮೌಲ್ಯವನ್ನು ಸುಮಾರು 69,000 ರೂಪಾಯಿಗಳೆಂದು ಅಂದಾಜಿಸಲಾಗಿದೆ.
ಅಕ್ರಮ ಸಾಗಾಟಕ್ಕೆ ಬಳಸಲಾದ ಆಟೋ ಸಹಿತ ಅಕ್ಕಿಯನ್ನು ವಶಪಡಿಸಿಕೊಂಡ ಅಧಿಕಾರಿಗಳು, ಪ್ರಕರಣವನ್ನು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಇದೀಗ ಆರೋಪಿಗಳನ್ನು ಪತ್ತೆ ಹಚ್ಚುವತ್ತ ಪೊಲೀಸರು ಕಂದಾಯ ಇಲಾಖೆಯ ಸಹಕಾರದಿಂದ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…