Latest

ಅಕ್ರಮ ಮರಳು ಮಾಫಿಯಾ ಪ್ರಕರಣ: ಯಾವ ಶಾಸಕ ಪುತ್ರ ಆದರೂ ಸರಿ ನನಗೆ ಲೆಕ್ಕ ಇಲ್ಲ!: ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ

ಅಕ್ರಮ ಮರಳು ಮಾಫಿಯಾಗೆ ತಡೆಹಿಡಿಯಲು ತೆರಳಿದ ಮಹಿಳಾ ಅಧಿಕಾರಿಗೆ, ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಭದ್ರಾವತಿ ಡಿವೈಎಸ್‌ಪಿಗೆ ಅಧಿಕೃತವಾಗಿ ದೂರು ನೀಡಿದ್ದು, ಪ್ರಕರಣ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ

ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, “ಯಾರೇ ಆಗಿರಲಿ, ತಪ್ಪು ಮಾಡಿದರೆ ಶಿಕ್ಷೆ ತಪ್ಪಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಶಾಸಕನ ಮಗನಾಗಿದ್ರೂ ನನಗೆಲ್ಲಾ ಗಣಿ ಇಲ್ಲ. ನಾವು ಮಹಿಳೆಯರ ಗೌರವವನ್ನು ಕಾಪಾಡಲು ಇಲ್ಲಿದ್ದೇವೆ. ಕೂಡಲೇ ಶಾಸಕರ ಪುತ್ರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.

ಅವರು ಇನ್ನೂ ಮುಂದುವರಿಯುತ್ತಾ, “ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಸವೇಶ್ ನ ವಿರುದ್ಧ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಸಂತ್ರಸ್ತೆ ಮಹಿಳಾ ಅಧಿಕಾರಿ ಮಾತ್ರವಲ್ಲ, ಸಾಮಾನ್ಯ ಮಹಿಳೆ ಆದರೂ ಸಹ ಇಂತಹ ವರ್ತನೆ ಅಸಹ್ಯಕರ” ಎಂದು ಹೇಳಿದರು.

ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ ಕತೆ

ಅಕ್ರಮ ಮರಳು ಮಾಫಿಯಾಗೆ ವಿರುದ್ಧ ದಾಳಿ ನಡೆಸಲು ಹೋದ ವೇಳೆ, ಶಾಸಕರ ಪುತ್ರ ಬಸವೇಶ್ ಮತ್ತು ಮತ್ತಷ್ಟು ಜನರಿಂದ ನಿರ್ಭೀತಿಯಾಗಿ ಅವಮಾನಿಸಲ್ಪಟ್ಟಿದ್ದ ಮಹಿಳಾ ಅಧಿಕಾರಿ ಜ್ಯೋತಿ, ಈ ಸಂಬಂಧ ದೂರು ದಾಖಲಿಸಿದ್ದಾರೆ.

“ನಾವು ದಾಳಿ ಮಾಡಿದಾಗ ನಮ್ಮ ಮೇಲೆ ಗಾಡಿ ಹತ್ತಿಸುತ್ತಾರೆ ಅಂತ ಬೆದರಿಸಿದರು. ಭಯ ಭೀತಿಯಿಂದ ಹಿಂತಿರುಗಬೇಕಾಯಿತು. ಅಲ್ಲದೆ, ಕೆಲವು ಅನಾಮಧೇಯ ದೂರವಾಣಿ ಕರೆಗಳು ಕೂಡ ಬಂದವು. ಆದರೆ, ನನ್ನ ತಂಡ ನನ್ನ ಬೆಂಬಲದಲ್ಲಿ ನಿಂತಿತ್ತು” ಎಂದು ಮಹಿಳಾ ಅಧಿಕಾರಿ ಜ್ಯೋತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಘಟನೆ ಸಂಬಂಧ ಶಿವಮೊಗ್ಗದ ಎಸ್‌ಪಿ ಅವರಿಗೂ ಸಂಪೂರ್ಣ ವರದಿ ನೀಡುವಂತೆ ಮಹಿಳಾ ಆಯೋಗ ಸೂಚನೆ ನೀಡಿದೆ. ಇದರಿಂದ ಶಾಸಕರ ಪುತ್ರನ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಈ ಪ್ರಕರಣ ಸರ್ಕಾರದ ಮಟ್ಟದಲ್ಲಿಯೂ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಹಂತದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವ ನಿರೀಕ್ಷೆಯಿದೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

12 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

13 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

13 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago