ಅಕ್ರಮ ಮರಳು ಮಾಫಿಯಾಗೆ ತಡೆಹಿಡಿಯಲು ತೆರಳಿದ ಮಹಿಳಾ ಅಧಿಕಾರಿಗೆ, ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಭದ್ರಾವತಿ ಡಿವೈಎಸ್ಪಿಗೆ ಅಧಿಕೃತವಾಗಿ ದೂರು ನೀಡಿದ್ದು, ಪ್ರಕರಣ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ
ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, “ಯಾರೇ ಆಗಿರಲಿ, ತಪ್ಪು ಮಾಡಿದರೆ ಶಿಕ್ಷೆ ತಪ್ಪಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಶಾಸಕನ ಮಗನಾಗಿದ್ರೂ ನನಗೆಲ್ಲಾ ಗಣಿ ಇಲ್ಲ. ನಾವು ಮಹಿಳೆಯರ ಗೌರವವನ್ನು ಕಾಪಾಡಲು ಇಲ್ಲಿದ್ದೇವೆ. ಕೂಡಲೇ ಶಾಸಕರ ಪುತ್ರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.
ಅವರು ಇನ್ನೂ ಮುಂದುವರಿಯುತ್ತಾ, “ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಸವೇಶ್ ನ ವಿರುದ್ಧ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಸಂತ್ರಸ್ತೆ ಮಹಿಳಾ ಅಧಿಕಾರಿ ಮಾತ್ರವಲ್ಲ, ಸಾಮಾನ್ಯ ಮಹಿಳೆ ಆದರೂ ಸಹ ಇಂತಹ ವರ್ತನೆ ಅಸಹ್ಯಕರ” ಎಂದು ಹೇಳಿದರು.
ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ ಕತೆ
ಅಕ್ರಮ ಮರಳು ಮಾಫಿಯಾಗೆ ವಿರುದ್ಧ ದಾಳಿ ನಡೆಸಲು ಹೋದ ವೇಳೆ, ಶಾಸಕರ ಪುತ್ರ ಬಸವೇಶ್ ಮತ್ತು ಮತ್ತಷ್ಟು ಜನರಿಂದ ನಿರ್ಭೀತಿಯಾಗಿ ಅವಮಾನಿಸಲ್ಪಟ್ಟಿದ್ದ ಮಹಿಳಾ ಅಧಿಕಾರಿ ಜ್ಯೋತಿ, ಈ ಸಂಬಂಧ ದೂರು ದಾಖಲಿಸಿದ್ದಾರೆ.
“ನಾವು ದಾಳಿ ಮಾಡಿದಾಗ ನಮ್ಮ ಮೇಲೆ ಗಾಡಿ ಹತ್ತಿಸುತ್ತಾರೆ ಅಂತ ಬೆದರಿಸಿದರು. ಭಯ ಭೀತಿಯಿಂದ ಹಿಂತಿರುಗಬೇಕಾಯಿತು. ಅಲ್ಲದೆ, ಕೆಲವು ಅನಾಮಧೇಯ ದೂರವಾಣಿ ಕರೆಗಳು ಕೂಡ ಬಂದವು. ಆದರೆ, ನನ್ನ ತಂಡ ನನ್ನ ಬೆಂಬಲದಲ್ಲಿ ನಿಂತಿತ್ತು” ಎಂದು ಮಹಿಳಾ ಅಧಿಕಾರಿ ಜ್ಯೋತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
ಈ ಘಟನೆ ಸಂಬಂಧ ಶಿವಮೊಗ್ಗದ ಎಸ್ಪಿ ಅವರಿಗೂ ಸಂಪೂರ್ಣ ವರದಿ ನೀಡುವಂತೆ ಮಹಿಳಾ ಆಯೋಗ ಸೂಚನೆ ನೀಡಿದೆ. ಇದರಿಂದ ಶಾಸಕರ ಪುತ್ರನ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಈ ಪ್ರಕರಣ ಸರ್ಕಾರದ ಮಟ್ಟದಲ್ಲಿಯೂ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಹಂತದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವ ನಿರೀಕ್ಷೆಯಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…