Latest

ಅಕ್ರಮ ಮರಳು ಮಾಫಿಯಾ ಪ್ರಕರಣ: ಯಾವ ಶಾಸಕ ಪುತ್ರ ಆದರೂ ಸರಿ ನನಗೆ ಲೆಕ್ಕ ಇಲ್ಲ!: ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ

ಅಕ್ರಮ ಮರಳು ಮಾಫಿಯಾಗೆ ತಡೆಹಿಡಿಯಲು ತೆರಳಿದ ಮಹಿಳಾ ಅಧಿಕಾರಿಗೆ, ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಭದ್ರಾವತಿ ಡಿವೈಎಸ್‌ಪಿಗೆ ಅಧಿಕೃತವಾಗಿ ದೂರು ನೀಡಿದ್ದು, ಪ್ರಕರಣ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ

ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, “ಯಾರೇ ಆಗಿರಲಿ, ತಪ್ಪು ಮಾಡಿದರೆ ಶಿಕ್ಷೆ ತಪ್ಪಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಶಾಸಕನ ಮಗನಾಗಿದ್ರೂ ನನಗೆಲ್ಲಾ ಗಣಿ ಇಲ್ಲ. ನಾವು ಮಹಿಳೆಯರ ಗೌರವವನ್ನು ಕಾಪಾಡಲು ಇಲ್ಲಿದ್ದೇವೆ. ಕೂಡಲೇ ಶಾಸಕರ ಪುತ್ರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.

ಅವರು ಇನ್ನೂ ಮುಂದುವರಿಯುತ್ತಾ, “ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಸವೇಶ್ ನ ವಿರುದ್ಧ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಸಂತ್ರಸ್ತೆ ಮಹಿಳಾ ಅಧಿಕಾರಿ ಮಾತ್ರವಲ್ಲ, ಸಾಮಾನ್ಯ ಮಹಿಳೆ ಆದರೂ ಸಹ ಇಂತಹ ವರ್ತನೆ ಅಸಹ್ಯಕರ” ಎಂದು ಹೇಳಿದರು.

ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ ಕತೆ

ಅಕ್ರಮ ಮರಳು ಮಾಫಿಯಾಗೆ ವಿರುದ್ಧ ದಾಳಿ ನಡೆಸಲು ಹೋದ ವೇಳೆ, ಶಾಸಕರ ಪುತ್ರ ಬಸವೇಶ್ ಮತ್ತು ಮತ್ತಷ್ಟು ಜನರಿಂದ ನಿರ್ಭೀತಿಯಾಗಿ ಅವಮಾನಿಸಲ್ಪಟ್ಟಿದ್ದ ಮಹಿಳಾ ಅಧಿಕಾರಿ ಜ್ಯೋತಿ, ಈ ಸಂಬಂಧ ದೂರು ದಾಖಲಿಸಿದ್ದಾರೆ.

“ನಾವು ದಾಳಿ ಮಾಡಿದಾಗ ನಮ್ಮ ಮೇಲೆ ಗಾಡಿ ಹತ್ತಿಸುತ್ತಾರೆ ಅಂತ ಬೆದರಿಸಿದರು. ಭಯ ಭೀತಿಯಿಂದ ಹಿಂತಿರುಗಬೇಕಾಯಿತು. ಅಲ್ಲದೆ, ಕೆಲವು ಅನಾಮಧೇಯ ದೂರವಾಣಿ ಕರೆಗಳು ಕೂಡ ಬಂದವು. ಆದರೆ, ನನ್ನ ತಂಡ ನನ್ನ ಬೆಂಬಲದಲ್ಲಿ ನಿಂತಿತ್ತು” ಎಂದು ಮಹಿಳಾ ಅಧಿಕಾರಿ ಜ್ಯೋತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಘಟನೆ ಸಂಬಂಧ ಶಿವಮೊಗ್ಗದ ಎಸ್‌ಪಿ ಅವರಿಗೂ ಸಂಪೂರ್ಣ ವರದಿ ನೀಡುವಂತೆ ಮಹಿಳಾ ಆಯೋಗ ಸೂಚನೆ ನೀಡಿದೆ. ಇದರಿಂದ ಶಾಸಕರ ಪುತ್ರನ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಈ ಪ್ರಕರಣ ಸರ್ಕಾರದ ಮಟ್ಟದಲ್ಲಿಯೂ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಹಂತದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವ ನಿರೀಕ್ಷೆಯಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

13 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

13 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

13 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

13 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

13 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

13 hours ago