Latest

ಅಕ್ರಮ ಮರಳು ಮಾಫಿಯಾ ಪ್ರಕರಣ: ಯಾವ ಶಾಸಕ ಪುತ್ರ ಆದರೂ ಸರಿ ನನಗೆ ಲೆಕ್ಕ ಇಲ್ಲ!: ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ

ಅಕ್ರಮ ಮರಳು ಮಾಫಿಯಾಗೆ ತಡೆಹಿಡಿಯಲು ತೆರಳಿದ ಮಹಿಳಾ ಅಧಿಕಾರಿಗೆ, ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳಾ ಅಧಿಕಾರಿ ಭದ್ರಾವತಿ ಡಿವೈಎಸ್‌ಪಿಗೆ ಅಧಿಕೃತವಾಗಿ ದೂರು ನೀಡಿದ್ದು, ಪ್ರಕರಣ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಆಕ್ರೋಶ

ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, “ಯಾರೇ ಆಗಿರಲಿ, ತಪ್ಪು ಮಾಡಿದರೆ ಶಿಕ್ಷೆ ತಪ್ಪಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಶಾಸಕನ ಮಗನಾಗಿದ್ರೂ ನನಗೆಲ್ಲಾ ಗಣಿ ಇಲ್ಲ. ನಾವು ಮಹಿಳೆಯರ ಗೌರವವನ್ನು ಕಾಪಾಡಲು ಇಲ್ಲಿದ್ದೇವೆ. ಕೂಡಲೇ ಶಾಸಕರ ಪುತ್ರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.

ಅವರು ಇನ್ನೂ ಮುಂದುವರಿಯುತ್ತಾ, “ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಸವೇಶ್ ನ ವಿರುದ್ಧ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಸಂತ್ರಸ್ತೆ ಮಹಿಳಾ ಅಧಿಕಾರಿ ಮಾತ್ರವಲ್ಲ, ಸಾಮಾನ್ಯ ಮಹಿಳೆ ಆದರೂ ಸಹ ಇಂತಹ ವರ್ತನೆ ಅಸಹ್ಯಕರ” ಎಂದು ಹೇಳಿದರು.

ಮಹಿಳಾ ಅಧಿಕಾರಿ ಜ್ಯೋತಿ ದೂರು ನೀಡಿದ ಕತೆ

ಅಕ್ರಮ ಮರಳು ಮಾಫಿಯಾಗೆ ವಿರುದ್ಧ ದಾಳಿ ನಡೆಸಲು ಹೋದ ವೇಳೆ, ಶಾಸಕರ ಪುತ್ರ ಬಸವೇಶ್ ಮತ್ತು ಮತ್ತಷ್ಟು ಜನರಿಂದ ನಿರ್ಭೀತಿಯಾಗಿ ಅವಮಾನಿಸಲ್ಪಟ್ಟಿದ್ದ ಮಹಿಳಾ ಅಧಿಕಾರಿ ಜ್ಯೋತಿ, ಈ ಸಂಬಂಧ ದೂರು ದಾಖಲಿಸಿದ್ದಾರೆ.

“ನಾವು ದಾಳಿ ಮಾಡಿದಾಗ ನಮ್ಮ ಮೇಲೆ ಗಾಡಿ ಹತ್ತಿಸುತ್ತಾರೆ ಅಂತ ಬೆದರಿಸಿದರು. ಭಯ ಭೀತಿಯಿಂದ ಹಿಂತಿರುಗಬೇಕಾಯಿತು. ಅಲ್ಲದೆ, ಕೆಲವು ಅನಾಮಧೇಯ ದೂರವಾಣಿ ಕರೆಗಳು ಕೂಡ ಬಂದವು. ಆದರೆ, ನನ್ನ ತಂಡ ನನ್ನ ಬೆಂಬಲದಲ್ಲಿ ನಿಂತಿತ್ತು” ಎಂದು ಮಹಿಳಾ ಅಧಿಕಾರಿ ಜ್ಯೋತಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಘಟನೆ ಸಂಬಂಧ ಶಿವಮೊಗ್ಗದ ಎಸ್‌ಪಿ ಅವರಿಗೂ ಸಂಪೂರ್ಣ ವರದಿ ನೀಡುವಂತೆ ಮಹಿಳಾ ಆಯೋಗ ಸೂಚನೆ ನೀಡಿದೆ. ಇದರಿಂದ ಶಾಸಕರ ಪುತ್ರನ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಈ ಪ್ರಕರಣ ಸರ್ಕಾರದ ಮಟ್ಟದಲ್ಲಿಯೂ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಹಂತದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವ ನಿರೀಕ್ಷೆಯಿದೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

3 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

3 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

6 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

8 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

8 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

8 hours ago