ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದಲ್ಲಿ ಅಕ್ರಮ ಮರಳು ತೆಗೆಯುವ ಕಾರ್ಯ ಬೆಳಕಿಗೆ ಬಂದಿದ್ದು, ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಪಂಚಗಂಗಾವಳಿ ನದಿಯಲ್ಲಿ ಪರವಾನಿಗೆ ಇಲ್ಲದೆ ಮರಳು ತೆಗೆಯಲಾಗುತ್ತಿತ್ತು ಎಂಬ ಮಾಹಿತಿ ಮೇರೆಗೆ, ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜಾ ನಾಯ್ಕ್ ನೇತೃತ್ವದ ತಂಡ ಭಾನುವಾರ ದಾಳಿ ನಡೆಸಿತು. ನಾನಾ ಸಾಹೇಬ್ ರಸ್ತೆ ಕೊನೆ ಮತ್ತು ರಿಂಗ್ ರೋಡ್ ಸಮೀಪದ ನದಿತಟದಲ್ಲಿ ಈ ದಂಧೆ ನಡೆಯುತ್ತಿತ್ತು.
ದಾಳಿಯಲ್ಲಿ ಆರೋಪಿತ ಉದಯ ಮೆಂಡನ್ ಎಂಬಾತನು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇನ್ನುಳಿದ ಮತ್ತೊಬ್ಬ ಆರೋಪಿ ಸುನಿಲ್ ಎಂಬವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ಮರಳನ್ನು ದೋಣಿಯಲ್ಲಿ ತುಂಬಿ ಟಿಪ್ಪರ್ ವಾಹನದ ಮೂಲಕ ಸಾಗಾಟ ಮಾಡಲು ಯೋಜಿಸುತ್ತಿದ್ದರು.
ಪೊಲೀಸರು ಘಟನೆಯ ಸ್ಥಳದಿಂದ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ₹15,000 ಮೌಲ್ಯದ ಫೈಬರ್ ದೋಣಿ, ₹5,000 ಮೌಲ್ಯದ 1½ ಯುನಿಟ್ ಮರಳು, ಹಾಗೂ ₹5 ಲಕ್ಷ ಮೌಲ್ಯದ KA20 C6070 ಸಂಖ್ಯೆಯ ಟಿಪ್ಪರ್ ವಾಹನ ಸೇರಿವೆ. ಜೊತೆಗೆ ಕಬ್ಬಿಣದ ಹಾರೆ ಮತ್ತು ಫೈಬರ್ ಬುಟ್ಟಿಗಳು ಎರಡು ಸಹ ಜಪ್ತಿ ಮಾಡಲಾಗಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಸಿಕ್ಕಿಲ್ಲದ ಆರೋಪಿ ಸುನಿಲ್ ಬಗ್ಗೆ ಹುಡುಕಾಟ ಮುಂದುವರೆದಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…