ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದಲ್ಲಿ ಅಕ್ರಮ ಮರಳು ತೆಗೆಯುವ ಕಾರ್ಯ ಬೆಳಕಿಗೆ ಬಂದಿದ್ದು, ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಪಂಚಗಂಗಾವಳಿ ನದಿಯಲ್ಲಿ ಪರವಾನಿಗೆ ಇಲ್ಲದೆ ಮರಳು ತೆಗೆಯಲಾಗುತ್ತಿತ್ತು ಎಂಬ ಮಾಹಿತಿ ಮೇರೆಗೆ, ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜಾ ನಾಯ್ಕ್ ನೇತೃತ್ವದ ತಂಡ ಭಾನುವಾರ ದಾಳಿ ನಡೆಸಿತು. ನಾನಾ ಸಾಹೇಬ್ ರಸ್ತೆ ಕೊನೆ ಮತ್ತು ರಿಂಗ್ ರೋಡ್ ಸಮೀಪದ ನದಿತಟದಲ್ಲಿ ಈ ದಂಧೆ ನಡೆಯುತ್ತಿತ್ತು.
ದಾಳಿಯಲ್ಲಿ ಆರೋಪಿತ ಉದಯ ಮೆಂಡನ್ ಎಂಬಾತನು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇನ್ನುಳಿದ ಮತ್ತೊಬ್ಬ ಆರೋಪಿ ಸುನಿಲ್ ಎಂಬವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ಮರಳನ್ನು ದೋಣಿಯಲ್ಲಿ ತುಂಬಿ ಟಿಪ್ಪರ್ ವಾಹನದ ಮೂಲಕ ಸಾಗಾಟ ಮಾಡಲು ಯೋಜಿಸುತ್ತಿದ್ದರು.
ಪೊಲೀಸರು ಘಟನೆಯ ಸ್ಥಳದಿಂದ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ₹15,000 ಮೌಲ್ಯದ ಫೈಬರ್ ದೋಣಿ, ₹5,000 ಮೌಲ್ಯದ 1½ ಯುನಿಟ್ ಮರಳು, ಹಾಗೂ ₹5 ಲಕ್ಷ ಮೌಲ್ಯದ KA20 C6070 ಸಂಖ್ಯೆಯ ಟಿಪ್ಪರ್ ವಾಹನ ಸೇರಿವೆ. ಜೊತೆಗೆ ಕಬ್ಬಿಣದ ಹಾರೆ ಮತ್ತು ಫೈಬರ್ ಬುಟ್ಟಿಗಳು ಎರಡು ಸಹ ಜಪ್ತಿ ಮಾಡಲಾಗಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಸಿಕ್ಕಿಲ್ಲದ ಆರೋಪಿ ಸುನಿಲ್ ಬಗ್ಗೆ ಹುಡುಕಾಟ ಮುಂದುವರೆದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…