Latest

ಪಂಚಗಂಗಾವಳಿ ನದಿಯಲ್ಲಿ ಅಕ್ರಮ ಮರಳು ದಂಧೆ ಬಯಲು – ಕುಂದಾಪುರದಲ್ಲಿ ಒಬ್ಬನ ಬಂಧನ, ವಾಹನ-ದೋಣಿ ಜಪ್ತಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದಲ್ಲಿ ಅಕ್ರಮ ಮರಳು ತೆಗೆಯುವ ಕಾರ್ಯ ಬೆಳಕಿಗೆ ಬಂದಿದ್ದು, ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಪಂಚಗಂಗಾವಳಿ ನದಿಯಲ್ಲಿ ಪರವಾನಿಗೆ ಇಲ್ಲದೆ ಮರಳು ತೆಗೆಯಲಾಗುತ್ತಿತ್ತು ಎಂಬ ಮಾಹಿತಿ ಮೇರೆಗೆ, ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜಾ ನಾಯ್ಕ್ ನೇತೃತ್ವದ ತಂಡ ಭಾನುವಾರ ದಾಳಿ ನಡೆಸಿತು. ನಾನಾ ಸಾಹೇಬ್ ರಸ್ತೆ ಕೊನೆ ಮತ್ತು ರಿಂಗ್ ರೋಡ್ ಸಮೀಪದ ನದಿತಟದಲ್ಲಿ ಈ ದಂಧೆ ನಡೆಯುತ್ತಿತ್ತು.

ದಾಳಿಯಲ್ಲಿ ಆರೋಪಿತ ಉದಯ ಮೆಂಡನ್ ಎಂಬಾತನು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇನ್ನುಳಿದ ಮತ್ತೊಬ್ಬ ಆರೋಪಿ ಸುನಿಲ್ ಎಂಬವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ಮರಳನ್ನು ದೋಣಿಯಲ್ಲಿ ತುಂಬಿ ಟಿಪ್ಪರ್ ವಾಹನದ ಮೂಲಕ ಸಾಗಾಟ ಮಾಡಲು ಯೋಜಿಸುತ್ತಿದ್ದರು.

ಪೊಲೀಸರು ಘಟನೆಯ ಸ್ಥಳದಿಂದ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ₹15,000 ಮೌಲ್ಯದ ಫೈಬರ್ ದೋಣಿ, ₹5,000 ಮೌಲ್ಯದ 1½ ಯುನಿಟ್ ಮರಳು, ಹಾಗೂ ₹5 ಲಕ್ಷ ಮೌಲ್ಯದ KA20 C6070 ಸಂಖ್ಯೆಯ ಟಿಪ್ಪರ್ ವಾಹನ ಸೇರಿವೆ. ಜೊತೆಗೆ ಕಬ್ಬಿಣದ ಹಾರೆ ಮತ್ತು ಫೈಬರ್ ಬುಟ್ಟಿಗಳು ಎರಡು ಸಹ ಜಪ್ತಿ ಮಾಡಲಾಗಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಸಿಕ್ಕಿಲ್ಲದ ಆರೋಪಿ ಸುನಿಲ್ ಬಗ್ಗೆ ಹುಡುಕಾಟ ಮುಂದುವರೆದಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago