ಹುಣಸೂರು ತಾಲೂಕಿನ ಮಂಗಳೂರು ಮಾಳ ಗ್ರಾಮದಲ್ಲಿ ಅಕ್ರಮ ಶ್ರೀಗಂಧ ಸಂಗ್ರಹಿಸಿರುವ ಮಾಹಿತಿಯ ಮೇರೆಗೆ ನಡೆದ ದಾಳಿಯಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಶಿವನಂಜು ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತ ಶಿವನಂಜು ತನ್ನ ಮನೆದಲ್ಲಿ ನಿಯಮವಿರುದ್ಧವಾಗಿ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಅಪರಾಧ ವಿಭಾಗದ ಉಪನಿರೀಕ್ಷಕ ರಾಮು ಅವರ ನೇತೃತ್ವದಲ್ಲಿ ತಂಡವೊಂದು ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿತು.
ದಾಳಿ ವೇಳೆ ಪ್ಲಾಸ್ಟಿಕ್ ಚೀಲದಲ್ಲಿ ಭದ್ರವಾಗಿ ಇಡಲಾಗಿದ್ದ ಸುಮಾರು 25 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಎಎಸ್ಐಗಳಾದ ಅಂತೋಣಿ ಕ್ರೂಸ್, ಚಿನ್ನಸ್ವಾಮಿ ಹಾಗೂ ಸಿಬ್ಬಂದಿಗಳಾದ ವಿಜಯರಘು, ಮಂಜುನಾಥ್, ಆರ್.ರಘು ಪಾಲ್ಗೊಂಡಿದ್ದರು ಎಂದು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.
ಶ್ರೀಗಂಧ ಅಕ್ರಮ ಸಂಗ್ರಹ ಹಾಗೂ ಸಾಗಣೆಯ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಮುಂದುವರೆಸಿದ್ದು, ಇನ್ನು ಹಲವು ಮಾಹಿತಿಗಳ ಹೊರಬರಲಿವೆ ಎಂಬ ನಿರೀಕ್ಷೆಯಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…