ಹುಣಸೂರು ತಾಲೂಕಿನ ಮಂಗಳೂರು ಮಾಳ ಗ್ರಾಮದಲ್ಲಿ ಅಕ್ರಮ ಶ್ರೀಗಂಧ ಸಂಗ್ರಹಿಸಿರುವ ಮಾಹಿತಿಯ ಮೇರೆಗೆ ನಡೆದ ದಾಳಿಯಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಶಿವನಂಜು ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತ ಶಿವನಂಜು ತನ್ನ ಮನೆದಲ್ಲಿ ನಿಯಮವಿರುದ್ಧವಾಗಿ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಅಪರಾಧ ವಿಭಾಗದ ಉಪನಿರೀಕ್ಷಕ ರಾಮು ಅವರ ನೇತೃತ್ವದಲ್ಲಿ ತಂಡವೊಂದು ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿತು.
ದಾಳಿ ವೇಳೆ ಪ್ಲಾಸ್ಟಿಕ್ ಚೀಲದಲ್ಲಿ ಭದ್ರವಾಗಿ ಇಡಲಾಗಿದ್ದ ಸುಮಾರು 25 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಎಎಸ್ಐಗಳಾದ ಅಂತೋಣಿ ಕ್ರೂಸ್, ಚಿನ್ನಸ್ವಾಮಿ ಹಾಗೂ ಸಿಬ್ಬಂದಿಗಳಾದ ವಿಜಯರಘು, ಮಂಜುನಾಥ್, ಆರ್.ರಘು ಪಾಲ್ಗೊಂಡಿದ್ದರು ಎಂದು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.
ಶ್ರೀಗಂಧ ಅಕ್ರಮ ಸಂಗ್ರಹ ಹಾಗೂ ಸಾಗಣೆಯ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ಮುಂದುವರೆಸಿದ್ದು, ಇನ್ನು ಹಲವು ಮಾಹಿತಿಗಳ ಹೊರಬರಲಿವೆ ಎಂಬ ನಿರೀಕ್ಷೆಯಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…