Latest

ಕಿರಾಣಿ ಅಂಗಡಿಗಳಿಗೆ ಅಕ್ರಮವಾಗಿ ಮದ್ಯ ಪೂರೈಕೆ; ಕಣ್ಮುಚ್ಚಿ ಕುಳಿತಿರುವ ನಾಲಾಯಕ್ ಅಧಿಕಾರಿಗಳು!

ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ಕಿರಾಣಿ ಅಂಗಡಿಗಳು ಹಾಗೂ ಪಾನ್ ಶಾಪ್ ಗಳಲ್ಲಿ ಸಹ ಮದ್ಯ ದೊರೆಯುತ್ತಿದೆ. ಬೇನಾಳ ಆರ್ ಸಿ ಗ್ರಾಮದ ಅಂಗಡಿಗಳಿಗೆ ಒಟಿ, ಬಿಪಿ, ವಿಸ್ಕಿ ಮುಂತಾದ ಬ್ರ್ಯಾಂಡ್ ಗಳನ್ನು ಆಲಮಟ್ಟಿ ಮಾರ್ಗದಿಂದ ಬಂದು ಬೇನಾಳ ಗ್ರಾಮ ಹಾಗೂ ಚಿಮ್ಮಲಗಿ ಗಣಿ ಮುಂತಾದ ಗ್ರಾಮಗಳಿಗೆ KA 29 A 7515 ನಂಬರ್ ನ ಆಟೋದಲ್ಲಿ ದಿನಾಲೂ ಗ್ರಾಮದ ಕಿರಾಣಿ ಅಂಗಡಿಗಳಿಗೆ ಹಾಗೂ ಪಾನ್ ಶಾಪ್ ಗಳಿಗೆ ಪುರೈಕೆ ಮಾಡುತ್ತಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಭ್ರಷ್ಟರ ಬೇಟೆ ಪತ್ರಿಕೆಯ ವರದಿಗಾರರು ಇಂದು ಮುಂಜಾನೆ ಅಕ್ರಮವಾಗಿ ಮದ್ಯಪೂರಕ್ಕೆ ಮಾಡುತ್ತಿರುವ ಆಟೋವನ್ನು ಹಿಡಿದು ಪ್ರಶ್ನಿಸಿರುತ್ತಾರೆ. ಆತ ನನಗೆ ಲೈಸೆನ್ಸ್ ಕೊಟ್ಟಿದ್ದಾರೆ ನಾನು ಎಲ್ಲಾ ಕಡೆ ಪೂರೈಕೆ ಮಾಡಬಹುದು ಎಂದು ಹೇಳಿಕೊಂಡಿರುತ್ತಾನೆ. ಈ ರೀತಿ ಕಿರಾಣಿ ಅಂಗಡಿಗಳಿಗೆ ಹಾಗೂ ಪಾನ್ ಶಾಪ್ ಗಳಿಗೆ ಪೂರೈಕೆ ಮಾಡಲು ಅನುಮತಿ ಕೊಟ್ಟವರು ಯಾರು?

ರಾಜಾರೋಷವಾಗಿ ನನಗೆ ಅನುಮತಿ ಕೊಟ್ಟಿದ್ದಾರೆ ನಾನು ಪೂರೈಕೆ ಮಾಡುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದರೆ ಇವನಿಗೆ ಇಷ್ಟು ಧೈರ್ಯ ಬರಲು ಅಧಿಕಾರಿಗಳೇ ಕಾರಣಾನಾ? ರಾಜ ರೋಷವಾಗಿ ಈ ರೀತಿ ಬೆಳಗಿನ ಹೊತ್ತೆ ಅಕ್ರಮ ಮದ್ಯವನ್ನು ಅಂಗಡಿಗಳಿಗೆ ಪೂರೈಕೆ ಮಾಡುತ್ತಿದ್ದರು ಸಹ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳಿಗೆ ಏನೆನ್ನಬೇಕು? ಅಕ್ರಮವಾಗಿ ಮದ್ಯ ಸಾಗಾಣಿಕೆಗೆ ಬಿಟ್ಟು ಅಧಿಕಾರಿಗಳೇನು ಕಮಿಷನ್ ಲೆಕ್ಕ ಹಾಕುತ್ತಿದ್ದಾರಾ? ಅಥವಾ ನಮಗೇಕೆ ಎಂದು ನಿದ್ದೆ ಮಾಡುತ್ತಿದ್ದಾರಾ?

ಪ್ರತಿಯೊಂದು ಹಳ್ಳಿಗಳಿಗೆ ಈ ರೀತಿ ಮದ್ಯವನ್ನು ಪೂರೈಕೆ ಮಾಡಿದರೆ ಅಲ್ಲಿನ ಜನರು ಕುಡಿದು ಹಾಳಾಗಿ ಅವರ ಕುಟುಂಬ ಬೀದಿಗೆ ಬಂದರೆ ನೋಡುವವರು ಯಾರು?  ಬಾಗೇವಾಡಿ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಸಾಗಾಣಿಕೆ ಹಾಗೂ ಮದ್ಯ ಮಾರಾಟಕ್ಕೆ ಕಡಿವಾಣ ಯಾವಾಗ?

ವರದಿ: ಸಂಗಪ್ಪ ಚಲವಾದಿ

 

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

4 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

5 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

5 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago