Latest

ಕಿರಾಣಿ ಅಂಗಡಿಗಳಿಗೆ ಅಕ್ರಮವಾಗಿ ಮದ್ಯ ಪೂರೈಕೆ; ಕಣ್ಮುಚ್ಚಿ ಕುಳಿತಿರುವ ನಾಲಾಯಕ್ ಅಧಿಕಾರಿಗಳು!

ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ಕಿರಾಣಿ ಅಂಗಡಿಗಳು ಹಾಗೂ ಪಾನ್ ಶಾಪ್ ಗಳಲ್ಲಿ ಸಹ ಮದ್ಯ ದೊರೆಯುತ್ತಿದೆ. ಬೇನಾಳ ಆರ್ ಸಿ ಗ್ರಾಮದ ಅಂಗಡಿಗಳಿಗೆ ಒಟಿ, ಬಿಪಿ, ವಿಸ್ಕಿ ಮುಂತಾದ ಬ್ರ್ಯಾಂಡ್ ಗಳನ್ನು ಆಲಮಟ್ಟಿ ಮಾರ್ಗದಿಂದ ಬಂದು ಬೇನಾಳ ಗ್ರಾಮ ಹಾಗೂ ಚಿಮ್ಮಲಗಿ ಗಣಿ ಮುಂತಾದ ಗ್ರಾಮಗಳಿಗೆ KA 29 A 7515 ನಂಬರ್ ನ ಆಟೋದಲ್ಲಿ ದಿನಾಲೂ ಗ್ರಾಮದ ಕಿರಾಣಿ ಅಂಗಡಿಗಳಿಗೆ ಹಾಗೂ ಪಾನ್ ಶಾಪ್ ಗಳಿಗೆ ಪುರೈಕೆ ಮಾಡುತ್ತಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಭ್ರಷ್ಟರ ಬೇಟೆ ಪತ್ರಿಕೆಯ ವರದಿಗಾರರು ಇಂದು ಮುಂಜಾನೆ ಅಕ್ರಮವಾಗಿ ಮದ್ಯಪೂರಕ್ಕೆ ಮಾಡುತ್ತಿರುವ ಆಟೋವನ್ನು ಹಿಡಿದು ಪ್ರಶ್ನಿಸಿರುತ್ತಾರೆ. ಆತ ನನಗೆ ಲೈಸೆನ್ಸ್ ಕೊಟ್ಟಿದ್ದಾರೆ ನಾನು ಎಲ್ಲಾ ಕಡೆ ಪೂರೈಕೆ ಮಾಡಬಹುದು ಎಂದು ಹೇಳಿಕೊಂಡಿರುತ್ತಾನೆ. ಈ ರೀತಿ ಕಿರಾಣಿ ಅಂಗಡಿಗಳಿಗೆ ಹಾಗೂ ಪಾನ್ ಶಾಪ್ ಗಳಿಗೆ ಪೂರೈಕೆ ಮಾಡಲು ಅನುಮತಿ ಕೊಟ್ಟವರು ಯಾರು?

ರಾಜಾರೋಷವಾಗಿ ನನಗೆ ಅನುಮತಿ ಕೊಟ್ಟಿದ್ದಾರೆ ನಾನು ಪೂರೈಕೆ ಮಾಡುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದರೆ ಇವನಿಗೆ ಇಷ್ಟು ಧೈರ್ಯ ಬರಲು ಅಧಿಕಾರಿಗಳೇ ಕಾರಣಾನಾ? ರಾಜ ರೋಷವಾಗಿ ಈ ರೀತಿ ಬೆಳಗಿನ ಹೊತ್ತೆ ಅಕ್ರಮ ಮದ್ಯವನ್ನು ಅಂಗಡಿಗಳಿಗೆ ಪೂರೈಕೆ ಮಾಡುತ್ತಿದ್ದರು ಸಹ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳಿಗೆ ಏನೆನ್ನಬೇಕು? ಅಕ್ರಮವಾಗಿ ಮದ್ಯ ಸಾಗಾಣಿಕೆಗೆ ಬಿಟ್ಟು ಅಧಿಕಾರಿಗಳೇನು ಕಮಿಷನ್ ಲೆಕ್ಕ ಹಾಕುತ್ತಿದ್ದಾರಾ? ಅಥವಾ ನಮಗೇಕೆ ಎಂದು ನಿದ್ದೆ ಮಾಡುತ್ತಿದ್ದಾರಾ?

ಪ್ರತಿಯೊಂದು ಹಳ್ಳಿಗಳಿಗೆ ಈ ರೀತಿ ಮದ್ಯವನ್ನು ಪೂರೈಕೆ ಮಾಡಿದರೆ ಅಲ್ಲಿನ ಜನರು ಕುಡಿದು ಹಾಳಾಗಿ ಅವರ ಕುಟುಂಬ ಬೀದಿಗೆ ಬಂದರೆ ನೋಡುವವರು ಯಾರು?  ಬಾಗೇವಾಡಿ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಸಾಗಾಣಿಕೆ ಹಾಗೂ ಮದ್ಯ ಮಾರಾಟಕ್ಕೆ ಕಡಿವಾಣ ಯಾವಾಗ?

ವರದಿ: ಸಂಗಪ್ಪ ಚಲವಾದಿ

 

ಭ್ರಷ್ಟರ ಬೇಟೆ

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

14 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

14 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

16 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

16 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

16 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

2 days ago