Latest

ಕಿರಾಣಿ ಅಂಗಡಿಗಳಿಗೆ ಅಕ್ರಮವಾಗಿ ಮದ್ಯ ಪೂರೈಕೆ; ಕಣ್ಮುಚ್ಚಿ ಕುಳಿತಿರುವ ನಾಲಾಯಕ್ ಅಧಿಕಾರಿಗಳು!

ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ಕಿರಾಣಿ ಅಂಗಡಿಗಳು ಹಾಗೂ ಪಾನ್ ಶಾಪ್ ಗಳಲ್ಲಿ ಸಹ ಮದ್ಯ ದೊರೆಯುತ್ತಿದೆ. ಬೇನಾಳ ಆರ್ ಸಿ ಗ್ರಾಮದ ಅಂಗಡಿಗಳಿಗೆ ಒಟಿ, ಬಿಪಿ, ವಿಸ್ಕಿ ಮುಂತಾದ ಬ್ರ್ಯಾಂಡ್ ಗಳನ್ನು ಆಲಮಟ್ಟಿ ಮಾರ್ಗದಿಂದ ಬಂದು ಬೇನಾಳ ಗ್ರಾಮ ಹಾಗೂ ಚಿಮ್ಮಲಗಿ ಗಣಿ ಮುಂತಾದ ಗ್ರಾಮಗಳಿಗೆ KA 29 A 7515 ನಂಬರ್ ನ ಆಟೋದಲ್ಲಿ ದಿನಾಲೂ ಗ್ರಾಮದ ಕಿರಾಣಿ ಅಂಗಡಿಗಳಿಗೆ ಹಾಗೂ ಪಾನ್ ಶಾಪ್ ಗಳಿಗೆ ಪುರೈಕೆ ಮಾಡುತ್ತಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಭ್ರಷ್ಟರ ಬೇಟೆ ಪತ್ರಿಕೆಯ ವರದಿಗಾರರು ಇಂದು ಮುಂಜಾನೆ ಅಕ್ರಮವಾಗಿ ಮದ್ಯಪೂರಕ್ಕೆ ಮಾಡುತ್ತಿರುವ ಆಟೋವನ್ನು ಹಿಡಿದು ಪ್ರಶ್ನಿಸಿರುತ್ತಾರೆ. ಆತ ನನಗೆ ಲೈಸೆನ್ಸ್ ಕೊಟ್ಟಿದ್ದಾರೆ ನಾನು ಎಲ್ಲಾ ಕಡೆ ಪೂರೈಕೆ ಮಾಡಬಹುದು ಎಂದು ಹೇಳಿಕೊಂಡಿರುತ್ತಾನೆ. ಈ ರೀತಿ ಕಿರಾಣಿ ಅಂಗಡಿಗಳಿಗೆ ಹಾಗೂ ಪಾನ್ ಶಾಪ್ ಗಳಿಗೆ ಪೂರೈಕೆ ಮಾಡಲು ಅನುಮತಿ ಕೊಟ್ಟವರು ಯಾರು?

ರಾಜಾರೋಷವಾಗಿ ನನಗೆ ಅನುಮತಿ ಕೊಟ್ಟಿದ್ದಾರೆ ನಾನು ಪೂರೈಕೆ ಮಾಡುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದರೆ ಇವನಿಗೆ ಇಷ್ಟು ಧೈರ್ಯ ಬರಲು ಅಧಿಕಾರಿಗಳೇ ಕಾರಣಾನಾ? ರಾಜ ರೋಷವಾಗಿ ಈ ರೀತಿ ಬೆಳಗಿನ ಹೊತ್ತೆ ಅಕ್ರಮ ಮದ್ಯವನ್ನು ಅಂಗಡಿಗಳಿಗೆ ಪೂರೈಕೆ ಮಾಡುತ್ತಿದ್ದರು ಸಹ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳಿಗೆ ಏನೆನ್ನಬೇಕು? ಅಕ್ರಮವಾಗಿ ಮದ್ಯ ಸಾಗಾಣಿಕೆಗೆ ಬಿಟ್ಟು ಅಧಿಕಾರಿಗಳೇನು ಕಮಿಷನ್ ಲೆಕ್ಕ ಹಾಕುತ್ತಿದ್ದಾರಾ? ಅಥವಾ ನಮಗೇಕೆ ಎಂದು ನಿದ್ದೆ ಮಾಡುತ್ತಿದ್ದಾರಾ?

ಪ್ರತಿಯೊಂದು ಹಳ್ಳಿಗಳಿಗೆ ಈ ರೀತಿ ಮದ್ಯವನ್ನು ಪೂರೈಕೆ ಮಾಡಿದರೆ ಅಲ್ಲಿನ ಜನರು ಕುಡಿದು ಹಾಳಾಗಿ ಅವರ ಕುಟುಂಬ ಬೀದಿಗೆ ಬಂದರೆ ನೋಡುವವರು ಯಾರು?  ಬಾಗೇವಾಡಿ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಸಾಗಾಣಿಕೆ ಹಾಗೂ ಮದ್ಯ ಮಾರಾಟಕ್ಕೆ ಕಡಿವಾಣ ಯಾವಾಗ?

ವರದಿ: ಸಂಗಪ್ಪ ಚಲವಾದಿ

 

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

33 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

34 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

35 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

37 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

38 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

40 minutes ago