Latest

ಅಂಗನವಾಡಿ ಪೌಷ್ಟಿಕ ಆಹಾರ ಅಕ್ರಮ ವಹಿವಾಟು – 26 ಮಂದಿ ಬಂಧನ

ಹುಬ್ಬಳ್ಳಿ-ಧಾರವಾಡದಲ್ಲಿ ಅಂಗನವಾಡಿ ಮಕ್ಕಳಿಗೆ ಸರಕಾರದಿಂದ ನೀಡುವ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದ್ರಲ್ಲಿಯೂ ಪ್ರಮುಖ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ವಶಪಡಿಕೆ:
ಧಾರವಾಡದ ನರೆಂದ್ರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗುತ್ತಿದ್ದ ಸುಮಾರು 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ದಾಳಿ ನಡೆಸಿದಾಗ 329 ಚೀಲಗಳಲ್ಲಿ ಒಟ್ಟು 8 ಟನ್ ಆಹಾರ ಪದಾರ್ಥಗಳು ಪತ್ತೆಯಾಗಿದೆ. ವಶಪಡಿಸಿಕೊಂಡ ಆಹಾರದಲ್ಲಿ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಹಲವಾರು ಪದಾರ್ಥಗಳಿವೆ.

ಬಂಧಿತರು ಯಾರು?
ಈ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪಟ್ಟಿಯಲ್ಲಿ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ವಾಹನ ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದ್ ಗೌಸ್ ಖಲೀಪಾ, ಗೌತಮ್‌ಸಿಂಗ್ ಠಾಕೂರ್, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದ್ದಾರೆ. ಜೊತೆಗೆ 18 ಅಂಗನವಾಡಿ ಕಾರ್ಯಕರ್ತೆಯರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ದಾಳಿ ಹೇಗೆ ನಡೆಸಿದರು?
ಈ ಅಕ್ರಮ ಪೌಷ್ಟಿಕ ಆಹಾರ ವಹಿವಾಟಿನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಆಹಾರವನ್ನು ಸಾಗಿಸುತ್ತಿದ್ದ ವಾಹನವನ್ನು ಹಿಡಿದು, ಬೃಹತ್ ಪ್ರಮಾಣದ ಪೌಷ್ಟಿಕ ಆಹಾರ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಮುಂದಿನ ತನಿಖೆ ತೀವ್ರಗೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ. ಅಂಗನವಾಡಿ ಮಕ್ಕಳ ಹಕ್ಕನ್ನು ಕಿತ್ತುಕೊಳ್ಳುವಂತಹ ಈ ರೀತಿಯ ಅಕ್ರಮಗಳಿಗೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣ ;ಕಾಡಿಗೆ ಕರೆದೊಯ್ದು ತಮ್ಮನಿಂದ ಭೀಕರ ಕೊಲೆ..!

ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

36 minutes ago

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

2 hours ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

2 hours ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

2 hours ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

20 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago