Latest

ಅಂಗನವಾಡಿ ಪೌಷ್ಟಿಕ ಆಹಾರ ಅಕ್ರಮ ವಹಿವಾಟು – 26 ಮಂದಿ ಬಂಧನ

ಹುಬ್ಬಳ್ಳಿ-ಧಾರವಾಡದಲ್ಲಿ ಅಂಗನವಾಡಿ ಮಕ್ಕಳಿಗೆ ಸರಕಾರದಿಂದ ನೀಡುವ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದ್ರಲ್ಲಿಯೂ ಪ್ರಮುಖ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ವಶಪಡಿಕೆ:
ಧಾರವಾಡದ ನರೆಂದ್ರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗುತ್ತಿದ್ದ ಸುಮಾರು 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ದಾಳಿ ನಡೆಸಿದಾಗ 329 ಚೀಲಗಳಲ್ಲಿ ಒಟ್ಟು 8 ಟನ್ ಆಹಾರ ಪದಾರ್ಥಗಳು ಪತ್ತೆಯಾಗಿದೆ. ವಶಪಡಿಸಿಕೊಂಡ ಆಹಾರದಲ್ಲಿ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಹಲವಾರು ಪದಾರ್ಥಗಳಿವೆ.

ಬಂಧಿತರು ಯಾರು?
ಈ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪಟ್ಟಿಯಲ್ಲಿ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ವಾಹನ ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದ್ ಗೌಸ್ ಖಲೀಪಾ, ಗೌತಮ್‌ಸಿಂಗ್ ಠಾಕೂರ್, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದ್ದಾರೆ. ಜೊತೆಗೆ 18 ಅಂಗನವಾಡಿ ಕಾರ್ಯಕರ್ತೆಯರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ದಾಳಿ ಹೇಗೆ ನಡೆಸಿದರು?
ಈ ಅಕ್ರಮ ಪೌಷ್ಟಿಕ ಆಹಾರ ವಹಿವಾಟಿನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಆಹಾರವನ್ನು ಸಾಗಿಸುತ್ತಿದ್ದ ವಾಹನವನ್ನು ಹಿಡಿದು, ಬೃಹತ್ ಪ್ರಮಾಣದ ಪೌಷ್ಟಿಕ ಆಹಾರ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಮುಂದಿನ ತನಿಖೆ ತೀವ್ರಗೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ. ಅಂಗನವಾಡಿ ಮಕ್ಕಳ ಹಕ್ಕನ್ನು ಕಿತ್ತುಕೊಳ್ಳುವಂತಹ ಈ ರೀತಿಯ ಅಕ್ರಮಗಳಿಗೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

1 hour ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

2 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

2 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

12 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

12 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

15 hours ago