Latest

ಅಂಗನವಾಡಿ ಪೌಷ್ಟಿಕ ಆಹಾರ ಅಕ್ರಮ ವಹಿವಾಟು – 26 ಮಂದಿ ಬಂಧನ

ಹುಬ್ಬಳ್ಳಿ-ಧಾರವಾಡದಲ್ಲಿ ಅಂಗನವಾಡಿ ಮಕ್ಕಳಿಗೆ ಸರಕಾರದಿಂದ ನೀಡುವ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದ್ರಲ್ಲಿಯೂ ಪ್ರಮುಖ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ವಶಪಡಿಕೆ:
ಧಾರವಾಡದ ನರೆಂದ್ರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗುತ್ತಿದ್ದ ಸುಮಾರು 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ದಾಳಿ ನಡೆಸಿದಾಗ 329 ಚೀಲಗಳಲ್ಲಿ ಒಟ್ಟು 8 ಟನ್ ಆಹಾರ ಪದಾರ್ಥಗಳು ಪತ್ತೆಯಾಗಿದೆ. ವಶಪಡಿಸಿಕೊಂಡ ಆಹಾರದಲ್ಲಿ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಹಲವಾರು ಪದಾರ್ಥಗಳಿವೆ.

ಬಂಧಿತರು ಯಾರು?
ಈ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪಟ್ಟಿಯಲ್ಲಿ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ವಾಹನ ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದ್ ಗೌಸ್ ಖಲೀಪಾ, ಗೌತಮ್‌ಸಿಂಗ್ ಠಾಕೂರ್, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದ್ದಾರೆ. ಜೊತೆಗೆ 18 ಅಂಗನವಾಡಿ ಕಾರ್ಯಕರ್ತೆಯರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ದಾಳಿ ಹೇಗೆ ನಡೆಸಿದರು?
ಈ ಅಕ್ರಮ ಪೌಷ್ಟಿಕ ಆಹಾರ ವಹಿವಾಟಿನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಆಹಾರವನ್ನು ಸಾಗಿಸುತ್ತಿದ್ದ ವಾಹನವನ್ನು ಹಿಡಿದು, ಬೃಹತ್ ಪ್ರಮಾಣದ ಪೌಷ್ಟಿಕ ಆಹಾರ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಮುಂದಿನ ತನಿಖೆ ತೀವ್ರಗೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ. ಅಂಗನವಾಡಿ ಮಕ್ಕಳ ಹಕ್ಕನ್ನು ಕಿತ್ತುಕೊಳ್ಳುವಂತಹ ಈ ರೀತಿಯ ಅಕ್ರಮಗಳಿಗೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

55 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

56 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

57 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

58 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

16 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

16 hours ago