ಹಿರಿಯಡ್ಕ, ಜೂನ್ 11: ಸರಕಾರದ ಉಚಿತ ಅನ್ನ ಬಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಿರಿಯಡ್ಕ ಪೊಲೀಸರು ಒಂದು ಬಂಧನ ನಡೆಸಿದ್ದಾರೆ.
ಮಾಹಿತಿಯಂತೆ, ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಪ್ರದೇಶದಲ್ಲಿರುವ ‘ಪ್ರಭು ಜನರಲ್ ಸ್ಟೋರ್’ ಮಾಲಕ ವಾಸುದೇವ ಪ್ರಭು (ವಯಸ್ಸು 56) ಎಂಬವರು ಈ ಅಕ್ರಮ ವ್ಯವಹಾರದಲ್ಲಿ ತೊಡಗಿದ್ದರು ಎಂದು ಶಂಕಿಸಲಾಗಿದೆ. ಇವರು ಸಾರ್ವಜನಿಕರಿಂದ ಅನ್ನ ಬಾಗ್ಯ ಯೋಜನೆಯ ಅಕ್ಕಿಯನ್ನು ಖರೀದಿ ಮಾಡಿ ತನ್ನ ಅಂಗಡಿಯಲ್ಲಿ ದಾಸ್ತಾನು ಮಾಡಿಕೊಂಡಿದ್ದರು.
ಇದಾಗ್ಯೂ, ಆಪ್ತ ಮೂಲಗಳಿಂದ ದೊರೆತ ಮಾಹಿತಿಯ ಪ್ರಕಾರ, ಆಹಾರ ಇಲಾಖೆಯ ನಿರೀಕ್ಷಕರು ಮತ್ತು ಹಿರಿಯಡ್ಕ ಪೊಲೀಸರು ಜೂನ್ 10ರಂದು ಸ್ಥಳಕ್ಕೆ ಧಾಳಿ ನಡೆಸಿ, ಅಂಗಡಿಯಲ್ಲಿ ಸಂಗ್ರಹಿಸಲಾಗಿದ್ದ 55 ಕ್ವಿಂಟಾಲ್ 60 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಅಕ್ಕಿಯ ಮೌಲ್ಯ ಸುಮಾರು ₹1,27,880 ಎಂದು ಅಂದಾಜಿಸಲಾಗಿದೆ. ಅಕ್ಕಿಯನ್ನು 131 ಪ್ಲಾಸ್ಟಿಕ್ ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ದೃಷ್ಟಿಗೆ ಬಿದ್ದು, ಪ್ರಭು ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹಿರಿಯಡ್ಕ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…