Categories: CrimeLatest

ಅಕ್ರಮ ಸಂಬಂಧದ ಅಂತ್ಯ ಹತ್ಯೆಯಲ್ಲಿ: ಪತ್ನಿ–ಪ್ರೇಮಿಯ ಸಂಚಿನಲ್ಲಿ ಪತಿ ಕ್ರೂರ ಕೊಲೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಪತ್ನಿ ತನ್ನ ಪ್ರೇಮಿಯ ಜೊತೆ ಸೇರಿ ಗಂಡನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಲೋಕೇಂದ್ರ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಆತ ನಾಪತ್ತೆಯಾಗಿದ್ದ ಬಗ್ಗೆ ಆತನ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಏಪ್ರಿಲ್ 1ರಂದು ಆಗ್ರಾದ ಸೈಯಾನ್ ಪ್ರದೇಶದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಗುರುತಿಸಲು ಕಷ್ಟವಾಗಿತ್ತು. ಆದರೆ ಮುಂಗೈ ಮೇಲಿನ ಟ್ಯಾಟೂ ಮೂಲಕ ಅದು ಲೋಕೇಂದ್ರನ ಶವ ಎಂದು ಖಚಿತಪಡಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐದು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದರು. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ವೇಳೆ ಘಟನಾ ಸ್ಥಳದ ಬಳಿ ಮದ್ಯದ ಬಾಟಲಿ ಮತ್ತು ಕೆಲವು ಪುರಾವೆಗಳು ದೊರೆತಿದ್ದವು. ಈ ಆಧಾರದ ಮೇಲೆ ಲೋಕೇಂದ್ರನ ಪತ್ನಿ, ಆಕೆಯ ಪ್ರೇಮಿ ಮಹೇಶ್ ಪ್ರಜಾಪತಿ ಹಾಗೂ ಆತನ ಸ್ನೇಹಿತ ಧರ್ಮವೀರ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ವಿಚಾರಣೆಯಲ್ಲಿ ಹತ್ಯೆಯ ಹಿಂದಿನ ಸಂಚು ಬಯಲಾಗಿದೆ. ಲೋಕೇಂದ್ರನ ಪತ್ನಿ ಮತ್ತು ಮಹೇಶ್ ನಡುವೆ ದೀರ್ಘಕಾಲದಿಂದ ಅಕ್ರಮ ಸಂಬಂಧ ಇತ್ತು. ಇತ್ತೀಚೆಗೆ ಈ ಸಂಬಂಧದ ಬಗ್ಗೆ ತಿಳಿದುಕೊಂಡ ಲೋಕೇಂದ್ರ, ಪತ್ನಿಯನ್ನು ಗದರಿಸಿದ್ದ. ಇದರಿಂದ ಕೋಪಗೊಂಡ ಪತ್ನಿ ಮತ್ತು ಆಕೆಯ ಪ್ರೇಮಿ ಸೇರಿ ಹತ್ಯೆ ಸಂಚು ರೂಪಿಸಿದ್ದರು.

ಘಟನೆಯ ದಿನ ಲೋಕೇಂದ್ರ ಮನೆಯಿಂದ ಹೊರಟಾಗ, ಪತ್ನಿ ಮಹೇಶ್‌ಗೆ ಮಾಹಿತಿ ನೀಡಿದ್ದಳು. ನಂತರ ಮಹೇಶ್ ಮತ್ತು ಧರ್ಮವೀರ್, ಲೋಕೇಂದ್ರನನ್ನು ಹೊಲಕ್ಕೆ ಕರೆದುಕೊಂಡು ಹೋಗಿ ಮದ್ಯ ಸೇವಿಸುವ ನೆಪದಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಬಳಿಕ ಶವದ ಮೇಲೆ ಪೆಟ್ರೋಲ್ ಸುರಿದು ಗೋಧಿಯ ಮೂಟೆಗಳಿಂದ ಮುಚ್ಚಿ ಬೆಂಕಿ ಹಚ್ಚಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago