Categories: CrimeLatest

ಅಕ್ರಮ ಸಂಬಂಧದ ಅಂತ್ಯ ಹತ್ಯೆಯಲ್ಲಿ: ಪತ್ನಿ–ಪ್ರೇಮಿಯ ಸಂಚಿನಲ್ಲಿ ಪತಿ ಕ್ರೂರ ಕೊಲೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಪತ್ನಿ ತನ್ನ ಪ್ರೇಮಿಯ ಜೊತೆ ಸೇರಿ ಗಂಡನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಲೋಕೇಂದ್ರ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಆತ ನಾಪತ್ತೆಯಾಗಿದ್ದ ಬಗ್ಗೆ ಆತನ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಏಪ್ರಿಲ್ 1ರಂದು ಆಗ್ರಾದ ಸೈಯಾನ್ ಪ್ರದೇಶದಲ್ಲಿ ಅರ್ಧ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಗುರುತಿಸಲು ಕಷ್ಟವಾಗಿತ್ತು. ಆದರೆ ಮುಂಗೈ ಮೇಲಿನ ಟ್ಯಾಟೂ ಮೂಲಕ ಅದು ಲೋಕೇಂದ್ರನ ಶವ ಎಂದು ಖಚಿತಪಡಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐದು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದರು. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ವೇಳೆ ಘಟನಾ ಸ್ಥಳದ ಬಳಿ ಮದ್ಯದ ಬಾಟಲಿ ಮತ್ತು ಕೆಲವು ಪುರಾವೆಗಳು ದೊರೆತಿದ್ದವು. ಈ ಆಧಾರದ ಮೇಲೆ ಲೋಕೇಂದ್ರನ ಪತ್ನಿ, ಆಕೆಯ ಪ್ರೇಮಿ ಮಹೇಶ್ ಪ್ರಜಾಪತಿ ಹಾಗೂ ಆತನ ಸ್ನೇಹಿತ ಧರ್ಮವೀರ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ವಿಚಾರಣೆಯಲ್ಲಿ ಹತ್ಯೆಯ ಹಿಂದಿನ ಸಂಚು ಬಯಲಾಗಿದೆ. ಲೋಕೇಂದ್ರನ ಪತ್ನಿ ಮತ್ತು ಮಹೇಶ್ ನಡುವೆ ದೀರ್ಘಕಾಲದಿಂದ ಅಕ್ರಮ ಸಂಬಂಧ ಇತ್ತು. ಇತ್ತೀಚೆಗೆ ಈ ಸಂಬಂಧದ ಬಗ್ಗೆ ತಿಳಿದುಕೊಂಡ ಲೋಕೇಂದ್ರ, ಪತ್ನಿಯನ್ನು ಗದರಿಸಿದ್ದ. ಇದರಿಂದ ಕೋಪಗೊಂಡ ಪತ್ನಿ ಮತ್ತು ಆಕೆಯ ಪ್ರೇಮಿ ಸೇರಿ ಹತ್ಯೆ ಸಂಚು ರೂಪಿಸಿದ್ದರು.

ಘಟನೆಯ ದಿನ ಲೋಕೇಂದ್ರ ಮನೆಯಿಂದ ಹೊರಟಾಗ, ಪತ್ನಿ ಮಹೇಶ್‌ಗೆ ಮಾಹಿತಿ ನೀಡಿದ್ದಳು. ನಂತರ ಮಹೇಶ್ ಮತ್ತು ಧರ್ಮವೀರ್, ಲೋಕೇಂದ್ರನನ್ನು ಹೊಲಕ್ಕೆ ಕರೆದುಕೊಂಡು ಹೋಗಿ ಮದ್ಯ ಸೇವಿಸುವ ನೆಪದಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಬಳಿಕ ಶವದ ಮೇಲೆ ಪೆಟ್ರೋಲ್ ಸುರಿದು ಗೋಧಿಯ ಮೂಟೆಗಳಿಂದ ಮುಚ್ಚಿ ಬೆಂಕಿ ಹಚ್ಚಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

9 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

9 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

9 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

9 hours ago

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…

9 hours ago

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

9 hours ago