Crime

ಬಾಲ್ಯದ ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ! – ಗೆಳೆಯನನ್ನೇ ಮಚ್ಚಿನಿಂದ ಕೊಚ್ಚಿ ಹತ್ಯೆ

ಬೆಂಗಳೂರು: ನಗರದ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದ ಭೀಕರ ಹತ್ಯೆ ಪ್ರಕರಣ ಸ್ಥಳೀಯರಲ್ಲಿ ಬೆಚ್ಚಿಬೀಳಿಸುವಂತಾಗಿದೆ. ಮಚ್ಚಿನಿಂದ ಮನಬಂದಂತೆ ಕೊಚ್ಚಿ 35 ವರ್ಷದ ವಿಜಯಕುಮಾರ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ, ಆರೋಪಿ ಧನಂಜಯ ಅಲಿಯಾಸ್ ಜಯರಾಮ ಮತ್ತು ಅವನ ಗ್ಯಾಂಗ್ ಈ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧದ ವೈಮನಸ್ಸೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ವಿಜಯಕುಮಾರ್ ಸುಮಾರು ಹತ್ತು ವರ್ಷಗಳ ಹಿಂದೆ ಆಶಾ ಎಂಬ ಮಹಿಳೆಯನ್ನು ವಿವಾಹವಾಗಿದ್ದರು. ಆದರೆ, ಆರೋಪಿ ಧನಂಜಯ ವಿಜಯಕುಮಾರ್ ಪತ್ನಿ ಆಶಾ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದಾನೆಂಬ ಆರೋಪವಿದೆ. ಧನಂಜಯ ಮತ್ತು ಆಶಾ ಒಟ್ಟಿಗೆ ಇರುವ ಫೋಟೋ ವಿಜಯಕುಮಾರ್ ಕೈಗೆ ಸಿಕ್ಕಿದ್ದು, ಇದರಿಂದ ಇಬ್ಬರ ಮಧ್ಯ ಗಲಾಟೆ ತೀವ್ರಗೊಂಡಿತ್ತು. ವಿಚಿತ್ರವೆಂದರೆ, ಧನಂಜಯ ಮತ್ತು ವಿಜಯಕುಮಾರ್ ಇಬ್ಬರೂ ಬಾಲ್ಯದ ಸ್ನೇಹಿತರು.

ವಿಜಯಕುಮಾರ್ ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು, ಧನಂಜಯ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸ್ನೇಹಿತನ ಪತ್ನಿಯ ಜೊತೆಗಿನ ಸಂಬಂಧಕ್ಕೆ ವಿರೋಧ ವ್ಯಕ್ತವಾದ ಬಳಿಕ, ಧನಂಜಯ ಆಶಾಗೆ ಬೆದರಿಕೆ ಹಾಕಿ, “ನನ್ನೊಂದಿಗೆ ಸಹಕರಿಸದಿದ್ದರೆ ನಿನ್ನ ಕುಟುಂಬವನ್ನು ನಾಶಮಾಡುತ್ತೇನೆ” ಎಂದು ಎಚ್ಚರಿಸಿದ್ದಾನೆಂಬ ಮಾಹಿತಿ ದೊರೆತಿದೆ.

ಈ ಹಿನ್ನೆಲೆಯಲ್ಲಿ, ವಿಜಯಕುಮಾರ್ ಹತ್ಯೆಗೆ ಧನಂಜಯ ಪೂರ್ವನಿಯೋಜಿತ ಸ್ಕೆಚ್ ಹಾಕಿದ್ದಾನೆಂದು ಶಂಕಿಸಲಾಗಿದೆ. ಆಗಸ್ಟ್ 11ರ ರಾತ್ರಿ 8 ಗಂಟೆ ಸುಮಾರಿಗೆ, ವಿಜಯಕುಮಾರ್ ಮನೆಬಿಟ್ಟು ಹೊರಬಂದ ಕ್ಷಣಕ್ಕೆ, ಹೊಂಚುಹಾಕಿ ಕುಳಿತಿದ್ದ ಧನಂಜಯ ಮತ್ತು ಅವನ ತಂಡ ಹಠಾತ್ ದಾಳಿ ನಡೆಸಿದೆ. ಮಚ್ಚಿನಿಂದ ನಿರ್ದಯವಾಗಿ ಕೊಚ್ಚಿ ಹತ್ಯೆಗೈದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರಸ್ತುತ, ಪತ್ನಿ ಆಶಾವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಆರೋಪಿ ಧನಂಜಯ ಮತ್ತು ಅವನ ಸಹಚರರಿಗಾಗಿ ತೀವ್ರ ಶೋಧ ಕಾರ್ಯ ನಡೆದಿದೆ. ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಬಾಲ್ಯದ ಸ್ನೇಹಿತನ ಹೆಂಡತಿಯೊಂದಿಗೆ ಸಂಬಂಧ ಬೆಳೆಸಿ, ಅದರ ವಿಚಾರಕ್ಕೆ ಪ್ರಶ್ನಿಸಿದ ಗೆಳೆಯನನ್ನೇ ಕೊಚ್ಚಿ ಕೊಂದ ಧನಂಜಯನ ಕ್ರೂರ ಕೃತ್ಯವು ಸ್ಥಳೀಯರಲ್ಲಿ ಭಾರೀ ಆಕ್ರೋಶ ಮೂಡಿಸಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago