ಗುಂಡ್ಲುಪೇಟೆ ಪಟ್ಟಣದ ಸಮೀಪದ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಮೂಖಹಳ್ಳಿ ಗ್ರಾಮದ ನಿವಾಸಿ ನಂಜುಂಡಸ್ವಾಮಿ (23) ಕೊಲೆಗೆ ಸ್ನೇಹಿತನ ಸಹೋದರಿಯೊಂದಿಗೆ ಇದ್ದ ಅಕ್ರಮ ಸಂಬಂಧವೇ ಕಾರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಕೆಲ ದಿನಗಳ ಹಿಂದೆ ನಂಜುಂಡಸ್ವಾಮಿ ಶವ ದೊಡ್ಡಕೆರೆ ಏರಿ ಬಳಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆತ ಸ್ನೇಹಿತ ಅಜಯ್ ಜೊತೆ ಬೈಕ್ನಲ್ಲಿ ಹೊರಟಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈಗ ಅಜಯ್ ಅಲಿಯಾಸ್ ಪ್ರಮೋದ್ ಎಂಬಾತನೇ ಈ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆಯಲ್ಲಿ ತಿಳಿದುಬಂದಂತೆ, ಕೆಲಸ ಮುಗಿಸಿ ಮನೆಗೆ ಬಂದಿದ್ದ ನಂಜುಂಡಸ್ವಾಮಿಯನ್ನು ಪಾರ್ಟಿ ಮಾಡೋಣ ಎಂದು ಅಜಯ್ ಕರೆದುಕೊಂಡು ಹೋಗಿದ್ದಾನೆ. ಬಳಿಕ ಇಬ್ಬರೂ ಮದ್ಯಪಾನ ಮಾಡಿದ ಬಳಿಕ ಅಜಯ್ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.
ಬಾಲ್ಯದಿಂದಲೇ ನಂಜುಂಡಸ್ವಾಮಿ ಮತ್ತು ಅಜಯ್ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ ಅಜಯ್ನ ಸಹೋದರಿಯೊಂದಿಗೆ ನಂಜುಂಡಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ವಿಷಯ ತಿಳಿದು ಅಜಯ್ ಕೋಪಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಇನ್ನೂ ಅಜಯ್ ಸಹೋದರಿ ಈಗಾಗಲೇ ಮದುವೆಯಾಗಿದ್ದರೂ ನಂಜುಂಡಸ್ವಾಮಿ ಜೊತೆ ಸಂಬಂಧ ಮುಂದುವರಿದಿತ್ತು ಎನ್ನಲಾಗಿದೆ. ಒಮ್ಮೆ ಆಕೆಯ ಪತಿ ಇಬ್ಬರನ್ನೂ ಖಾಸಗಿ ಸಂದರ್ಭದಲ್ಲೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ ಎಂಬ ಮಾಹಿತಿ ಕೂಡ ಹೊರಬಂದಿದೆ. ಈ ವಿಚಾರ ಅಜಯ್ ಕಿವಿಗೂ ಬಿದ್ದಿದ್ದರಿಂದ ಆತ ತೀವ್ರ ಕೋಪಗೊಂಡಿದ್ದಾನೆ.
ಮಾರ್ಚ್ 1ರಂದು ಮನೆಯಲ್ಲಿ ಮಲಗಿದ್ದ ನಂಜುಂಡಸ್ವಾಮಿಯನ್ನು ಹೊರಗೆ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿದ ಬಳಿಕ ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಗುಂಡ್ಲುಪೇಟೆ ಪೊಲೀಸರು ಆರೋಪಿ ಅಜಯ್ ಅಲಿಯಾಸ್ ಪ್ರಮೋದ್ ಅನ್ನು ಬಂಧಿಸಿದ್ದು, ಕೊಲೆಗೆ ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…