ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶಿಕ್ಷಕಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಮೋಸಗೊಳಿಸಿ ಬ್ಲ್ಯಾಕ್ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯೊಬ್ಬನು ಇನ್ಸ್ಟಾಗ್ರಾಂ ಮೂಲಕ ಶಿಕ್ಷಕಿಯೊಂದಿಗೆ ಪರಿಚಯ ಬೆಳೆಸಿ, ತಾನು ಆಕೆಯ ಹಳೆಯ ಕ್ಲಾಸ್ಮೇಟ್ ಎಂದು ನಂಬಿಸಿದ್ದಾನೆ.
ಪರಿಚಯದ ಬಳಿಕ, “ನನಗೆ ಕ್ಯಾನ್ಸರ್ ಇದೆ, ಕೆಲವೇ ದಿನಗಳು ಮಾತ್ರ ಬದುಕಿದ್ದೇನೆ. ನನ್ನ ಕೊನೆಯ ಆಸೆ ನಿನ್ನೊಂದಿಗೆ ದೈಹಿಕ ಸಂಬಂಧ ಬೆಳೆಸುವುದು” ಎಂದು ಹೇಳಿ ಶಿಕ್ಷಕಿಯನ್ನು ಮನೋಭಾವನಾತ್ಮಕವಾಗಿ ಒತ್ತಡಕ್ಕೆ ಒಳಪಡಿಸಿದ್ದಾನೆ. ಶಿಕ್ಷಕಿ ಇದಕ್ಕೆ ನಿರಾಕರಿಸಿದಾಗ, ಕನಿಷ್ಠ ಬೆತ್ತಲೆ ವಿಡಿಯೋ ಕಳುಹಿಸು ಎಂದು ಕೇಳಿದ್ದಾನೆ.
ಆತನ ಮಾತಿಗೆ ಮೋಸಹೋದ ಶಿಕ್ಷಕಿ, ತನ್ನ ಖಾಸಗಿ ವಿಡಿಯೋವನ್ನು ಕಳುಹಿಸಿದ್ದಾಳೆ. ಬಳಿಕ ಆರೋಪಿಯು ಅದನ್ನೇ ಆಧಾರವಾಗಿ ಬಳಸಿಕೊಂಡು ಹಣಕ್ಕಾಗಿ ಹಾಗೂ ನೇರವಾಗಿ ಭೇಟಿಯಾಗಲು ಒತ್ತಾಯಿಸಿ, ಒಪ್ಪದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಇದರಿಂದ ಆತಂಕಗೊಂಡ ಶಿಕ್ಷಕಿ, ಚತುರವಾಗಿ ಆರೋಪಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಬಂದಿದ್ದ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೆ ತೆರಳಿದ ವೇಳೆ ಆರೋಪಿಯು ಆತ್ಮಹಾನಿಗೆ ಯತ್ನಿಸಿದ್ದರೂ, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ನಂಜನಗೂಡು: ಜಮೀನಿಗೆ ತೆರಳಿದ್ದ 63 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ…
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಒಂದೇ ಕುಟುಂಬದ ಐದು…
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿ ಅಂತಿಮ ಹಂತ ತಲುಪಿದ್ದು, ನಾಳೆ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ…
ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧ ಮೂರು ದಶಕಗಳ ಹಿಂದೆ ಗಂಭೀರ ಆರೋಪ ಮಾಡಿದ್ದ ನಟಿ ಬಿಂದಿಯಾ,…
ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ…
ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ…