Categories: CrimeLatest

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ ಗಂಡ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಪ್ರಿಯಕರನೇ ಆತನನ್ನು ಹೊಂಚು ಹಾಕಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಮೃತ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಅವರು ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದು, ತಾಯಿ, ಪತ್ನಿ ಪವಿತ್ರಾ ಹಾಗೂ ಮಕ್ಕಳೊಂದಿಗೆ ಶಾಂತಿಯುತ ಜೀವನ ನಡೆಸುತ್ತಿದ್ದರು. ಏಪ್ರಿಲ್ 13ರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಿದ್ದ ಶಿವಶಂಕರ್, ಗಾಳಿ ಸೇವಿಸಲು ಮತ್ತು ಫೋನ್‌ನಲ್ಲಿ ಮಾತನಾಡಲು ಮನೆಯಿಂದ ಹೊರಬಂದಿದ್ದರು. ಇದೇ ವೇಳೆ ಕತ್ತಲಲ್ಲಿ ಕಾಯುತ್ತಿದ್ದ ಆರೋಪಿ ಅನಿಲ್ ಕುಮಾರ್ ಮಚ್ಚಿನಿಂದ ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಮುಂದಿನ ಬೆಳಿಗ್ಗೆ ಶೌಚಾಲಯಕ್ಕೆ ತೆರಳಿದ ಶಿವಶಂಕರ್ ಅವರ ತಾಯಿ ಗೌರಮ್ಮ, ಮಗನ ಶವವನ್ನು ರಕ್ತದ ಮಡುವಿನಲ್ಲಿ ಕಂಡು ಬೆಚ್ಚಿಬಿದ್ದಿದ್ದಾರೆ. ಆರಂಭದಲ್ಲಿ ಯಾರೊಂದಿಗೂ ವೈಮನಸ್ಸಿಲ್ಲದ ಶಿವಶಂಕರ್ ಹತ್ಯೆಯ ಕಾರಣ ಪೊಲೀಸರಿಗೆ ಅಸ್ಪಷ್ಟವಾಗಿತ್ತು.

ಆದರೆ ತನಿಖೆ ಮುಂದುವರಿಸಿದಾಗ ಶಿವಶಂಕರ್ ಅವರ ಪತ್ನಿ ಪವಿತ್ರಾ ಮತ್ತು ಆರೋಪಿ ಅನಿಲ್ ಕುಮಾರ್ ನಡುವೆ ಕಳೆದ ನಾಲ್ಕು ವರ್ಷಗಳಿಂದ ಸ್ನೇಹ ಸಂಬಂಧ ಇರುವುದು ತಿಳಿದುಬಂದಿದೆ. ಇತ್ತೀಚೆಗೆ ಕುಟುಂಬದ ಸಲಹೆಯಂತೆ ಪವಿತ್ರಾ ಈ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದರು. “ನಿನ್ನ ಜೀವನವನ್ನು ನೀನೇ ಕಟ್ಟಿಕೊಳ್ಳು” ಎಂದು ಅನಿಲ್‌ಗೆ ತಿಳಿಸಿದ್ದರೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಪವಿತ್ರಾಳನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂಬ ಹಠಕ್ಕೆ ಬಿದ್ದ ಅನಿಲ್, ಶಿವಶಂಕರ್ ಅಡ್ಡಿಯಾಗುತ್ತಿದ್ದಾನೆ ಎಂದು ಭಾವಿಸಿ ಕೊಲೆ ಸಂಚು ರೂಪಿಸಿದ್ದಾನೆ. ರಾತ್ರಿ ಸಮಯದಲ್ಲಿ ಹೊಂಚು ಹಾಕಿ ಕತ್ತಿಯಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ.

ಕೊಲೆ ಬಳಿಕ ಸಹಜವಾಗಿ ವರ್ತಿಸುತ್ತಿದ್ದ ಅನಿಲ್ ಕುಮಾರ್ ಅನ್ನು ಹೊಸಕೋಟೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣದ ತನಿಖೆಯಲ್ಲಿ ಪವಿತ್ರಾಳ ಪಾತ್ರವಿಲ್ಲವೆಂಬುದು ಕಾಲ್‌ ದಾಖಲೆಗಳು ಹಾಗೂ ಸಂದೇಶಗಳ ಪರಿಶೀಲನೆಯಿಂದ ಸ್ಪಷ್ಟವಾಗಿದೆ.

ಪ್ರಸ್ತುತ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ತನಿಖೆ ಮುಂದುವರಿಯುತ್ತಿದೆ.

ಭ್ರಷ್ಟರ ಬೇಟೆ

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

2 hours ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

8 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

12 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

13 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

13 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

23 hours ago