Latest

ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ಪ್ರಸಾರವಾದ ಮೈಕ್ರೋ ಫೈನಾನ್ಸ್ ಹಾವಳಿ ಸುದ್ದಿಯ ಇಂಪ್ಯಾಕ್ಟ್.

ನಂಜನಗೂಡು: ನಂಜನಗೂಡು ತಾಲೂಕು ತಹಸಿಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ
ಇಪ್ಪತ್ತಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಠಾಣೆಗೆ ಕರೆಯಿಸಿ ವೃತ ನಿರೀಕ್ಷಕ ಚಂದ್ರಶೇಖರ್ ಮತ್ತು ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಸಭೆ ನಡೆಸಿದ್ದಾರೆ ಸುಮಾರು 20ಕ್ಕೂ ಹೆಚ್ಚು ಮೈಕ್ರೋಸ್ ಫೈನಾನ್ಸ್ ಸಿಬ್ಬಂದಿಗಳು ಸಭೆಯಲ್ಲಿ ಭಾಗಿ ಯಾಗಿದ್ದರು
ಹುಲ್ಲಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಹಲವಾರು ಹಳ್ಳಿಗಳ ನೂರಾರು ಕುಟುಂಬಗಳಿಗೆ ನೀಡಿರುವ ಸಾಲದ ವಿವರವನ್ನು ಕೇಳಿ ಮಾಹಿತಿ ಪಡೆದ ಪೊಲೀಸರು
ಕೂಲಿ ಕಾರ್ಮಿಕರಿಗೆ ಸಾಲ ನೀಡುವ ಮುನ್ನ ನೀವು ಸಾಲ ವಸೂ ಲಾತಿಯಲ್ಲೂ ತಮ್ಮ ಜವಾಬ್ದಾರಿ ಹಾಗೂ ಕಠಿಣ ಕ್ರಮದ ಬಗ್ಗೆ ಮಾಹಿತಿಯನ್ನು ಏಕೆ ತಿಳಿಸುವುದಿಲ್ಲ
ಸಾಲ ನೀಡಿದ ಮೇಲೆ ಕಿರುಕುಳದ ಅವಶ್ಯಕತೆ ಏಕೆ ? ಸಾಲ ನೀಡಿದ್ದೇವೆ ಎಂದು ಒಬ್ಬಂಟಿ ಮಹಿಳೆಯರ ಮನೆಗೆ ಹೋಗಿ ದಮ್ಕಿ ಹಾಕುವುದು ಎಷ್ಟರ ಮಟ್ಟಿಗೆ ಸರಿ ?
ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಾದ ನೀವು ಕೂಲಿ ಕಾರ್ಮಿಕರು ಬಡ ರೈತರಿಂದ ಸಾಲ ನೀಡಿ ಎಷ್ಟು ಪರ್ಸೆಂಟ್ ಬಡ್ಡಿಯನ್ನು ತೆಗೆದುಕೊಳ್ಳುತ್ತಿದ್ದೀರಿ
ನೀವು ತೆಗೆದುಕೊಳ್ಳುವ ಬಡ್ಡಿಯ ಮಾಹಿತಿಯನ್ನು ಆರ್ ಬಿ ಐ ಅಥವಾ ತಾಲೂಕು ದಂಡಾಧಿಕಾರಿಗಳು ಇಲ್ಲಾ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೀರಾ ?ನಿಮ್ಮ ಕಿರುಕುಳ ತಾಳಲಾರದೆ ನೀವು ಸಾಲ ನೀಡಿದ ಎಷ್ಟು ಕುಟುಂಬಗಳು ಬೀದಿಗೆ ಬಿದ್ದಿವೆ ಮನೆಯನ್ನು ತೊರೆದು ನಾಪತ್ತೆಯಾಗಿದ್ದಾರೆ ? ಎಂದು
ಖಾಸಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಹತ್ತು ಹಲವು ಪ್ರಶ್ನೆಗಳ ಸುರಿಮಳೆಗೈದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಚಾರ್ಜ್ ಮಾಡಿದ್ದಾರೆ.ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು ರವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ಮಾಡಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಬೆವರಳ್ಳಿಸಿದ್ದಾರೆ ಹುಲ್ಲಹಳ್ಳಿ ಪೊಲೀಸರು.ಪೊಲೀಸರ ಖಡಕ್ ಎಚ್ಚರಿಕೆಗೆ ತಬ್ಬಿಬಾದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗಿದ್ದಾರೆ
ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಾದ ನೀವು ಸಾಲ ನೀಡಿದ್ದೀರಿ ಆದರೆ ಅದನ್ನು ಕಾನೂನು ಬದ್ಧವಾಗಿ ವಸೂಲಾತಿಗೆ ಮುಂದಾಗಬೇಕು
ಸಾಲ ನೀಡಿದ್ದೇವೆ ಎಂದು ಯಾವುದೇ ದರ್ಪ, ಕಿರುಕುಳ ನೀಡಬಾರದು ಅವರ ಮನೆಯ ಮುಂಭಾಗಕ್ಕೆ ಹೋಗಿ ಬೆದರಿಕೆ ಹಾಕುವುದಾಗಲಿ ನೋಟೀಸ್ ಅಂಟಿಸುವುದಾಗಲಿ ಮಾಡಬಾರದು
ಹಾಗೇನಾದರೂ ಮಾಹಿತಿ ಕಂಡು ಬಂದಲ್ಲಿ ತಹಸೀಲ್ದಾರ್ ಅವರ ಆದೇಶದ ಮೇರೆಗೆ ಪೋಲಿಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್, ಪಿಎಸ್ಐ ಚೇತನ್ ಕುಮಾರ್ ದಫೆದಾರ್ ದೊಡ್ಡಯ್ಯ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಬಡವರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಗ್ರಾಮವನ್ನೆ ತೊರೆದ ಸಾಲಗಾರರು ಕಣ್ಮುಚ್ಚಿ ಕುಳಿತ ಜಿಲ್ಲಾ ಆಡಳಿತ ಮತ್ತು ಸರ್ಕಾರ ಎಂಬ ಶೀರ್ಷಿಕೆ ಯಡಿ ನಮ್ಮ ಪತ್ರಿಕೆಯಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು ಸುದ್ದಿಯ ಫಲಶೃತಿಯಿಂದಾಗಿ ಜಿಲ್ಲಾ ಮತ್ತು ತಾಲೂಕು ಆಡಳಿತ ಎಚ್ಚೆತ್ತುಕೊಂಡು ಪೊಲೀಸರಿಂದ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಬಿಸಿ ಮುಟ್ಟಿಸಿದೆ. ವರದಿ: ಮೋಹನ್

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

4 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago