Latest

ಇ.ಡಿ ಹಾಗೂ ಸಿಬಿಐ ಅಧಿಕಾರಿಗಳಂತೆ ನಟನೆ:₹88 ಲಕ್ಷ ವಂಚನೆಗೆ ವ್ಯಕ್ತಿ ಬಲಿ

ಬಳ್ಳಾರಿ: ಖದೀಮರು ಡಿಜಿಟಲ್ ಅರೆಸ್ಟ್ ನೆಪದಲ್ಲಿ ಸೆಣೆ ಹಾಕಿ ನಗರದ ನಿವೃತ್ತ ಸಿವಿಲ್ ಗುತ್ತಿಗೆದಾರರೊಬ್ಬರನ್ನು ₹88 ಲಕ್ಷಕ್ಕೂ ಅಧಿಕ ಹಣಕ್ಕೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿಯು ಬಳ್ಳಾರಿ ನಗರದ ಸೈಬರ್ ಅಪರಾಧ, ಆರ್ಥಿಕ ಅಪರಾಧ ಮತ್ತು ಮಾದಕದ್ರವ್ಯ ಠಾಣೆಗೆ ದೂರು ನೀಡಿದ್ದು, ಜುಲೈ 24ರಂದು ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತರು ಜುಲೈ 5ರಂದು ಅನೇಕ ಅಜ್ಞಾತ ಮೊಬೈಲ್ ನಂಬರ್‌ಗಳಿಂದ ಕರೆ ಮತ್ತು ವಿಡಿಯೊ ಕರೆಗಳನ್ನು ಪಡೆದಿದ್ದಾರೆ. ಕರೆ ಮಾಡಿದವರು ತಾವು ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರ ತನಿಖಾ ದಳ (CBI) ಅಧಿಕಾರಿಗಳೆಂದು ಸುಳ್ಳು ಪರಿಚಯ ನೀಡಿ, ಭಯ ಮೂಡಿಸಿದ್ದಾರೆ.

“ಜೆಟ್ ಏರ್‌ವೇಸ್‌ನ ಮಾಜಿ ಮುಖ್ಯಸ್ಥ ನರೇಶ್ ಗೊಯೆಲ್ ₹200 ಕೋಟಿಯ ಹಗರಣ ಮಾಡಿದ್ದಾರೆ. ಅವರ ನಿವಾಸದಲ್ಲಿ ನಿಮ್ಮ ಎಟಿಎಂ ಕಾರ್ಡ್ ಪತ್ತೆಯಾಗಿದ್ದು, ಅದರಿಂದ ₹2 ಕೋಟಿ ವರ್ಗಾವಣೆ ಮಾಡಲಾಗಿದೆ. ಈ ಹಣದ ವ್ಯವಹಾರದಲ್ಲಿ ನೀವು ₹25 ಲಕ್ಷ ಕಮಿಷನ್ ಪಡೆದಿದ್ದೀರಿ. ವೈಯಕ್ತಿಕ ಮಾಹಿತಿಯನ್ನು ಮಾರಾಟ ಮಾಡಿದ್ದೀರಿ. ನಿಮ್ಮ ವಿರುದ್ಧ ಬಂಧನ ವಾರೆಂಟ್ ಇದೆ” ಎಂದು ಹೇಳಿ, ವಾಟ್ಸಾಪ್‌ ಮೂಲಕ ನಕಲಿ ವಾರಂಟ್ ಕಳುಹಿಸಿ ಬೆದರಿಸಿದ್ದಾರೆ.

ಜುಲೈ 7ರಂದು ಮತ್ತೊಮ್ಮೆ ಕರೆ ಮಾಡಿದ ವಂಚಕರು, “ನಿಮ್ಮನ್ನು ಮುಂಬೈನ ಸಿಬಿಐ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ವಿಚಾರಣೆ ಮುಗಿಯುವವರೆಗೂ ನಾವು ಸೂಚಿಸುವ ಖಾತೆಗಳಿಗೆ ಹಣ ಜಮಾ ಮಾಡಬೇಕು” ಎಂದು ಹೇಳಿದ್ದಾರೆ. ವಂಚಿತರು ಭಯಪಟ್ಟು ಜುಲೈ 19ರವರೆಗೆ ಹಂತ ಹಂತವಾಗಿ ₹88,20,098 ರುಪಾಯಿ ಜಮೆ ಮಾಡಿದ್ದಾರೆ.

ಹೆಚ್ಚಾಗಿ ಹಣ ಕಳೆದುಕೊಂಡ ಬಳಿಕ ಇದೊಂದು ದೊಡ್ಡ ವಂಚನೆ ಎಂದು ಗ್ರಹಿಸಿದ ಸಂತ್ರಸ್ತರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಕೆಎಸ್‌ಆರ್‌ಟಿಸಿ ಅನುಕಂಪ ನೇಮಕಾತಿ ನಿಯಮ ಬದಲಾವಣೆ – ವಿವಾಹಿತ ಮಗಳು, ಸಹೋದರಿಯರಿಗೂ ಅವಕಾಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ನೌಕರರ ಕುಟುಂಬಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಅನುಕಂಪದ ಆಧಾರದ…

1 hour ago

ಶಾಲಾ ತರಗತಿಯಲ್ಲಿ 10 ಅಡಿ ಕಾಳಿಂಗ ಸರ್ಪ ಪತ್ತೆ: ವಿದ್ಯಾರ್ಥಿಗಳಲ್ಲಿ ಆತಂಕ

ಕಾರವಾರ: ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾದ ಘಟನೆ…

6 hours ago

ಹಣದಾಸೆಗೆ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ತಾಯಿ; ಗಿರಾಕಿಗಳ ಬಳಿ ಬಿಟ್ಟು ಬರುತ್ತಿದ್ದ ಮಲತಂದೆ:- ಮೂವರ ಬಂಧನ

ಬೆಂಗಳೂರು: ಹಣದಾಸೆಗೆ ಒಳಗಾಗಿ ತನ್ನದೇ 15 ವರ್ಷದ ಮಗಳನ್ನು ಮಾಂಸದಂಧೆಗೆ ತಳ್ಳಿದ ತಾಯಿಯ ಅಮಾನವೀಯ ಕೃತ್ಯವನ್ನು ಚಂದ್ರಾಲೇಔಟ್ ಪೊಲೀಸ್ ಠಾಣೆ…

11 hours ago

ಅಬಕಾರಿ ಅಧಿಕಾರಿಗೆ ಲೋಕಾಯುಕ್ತ ಬಲೆ: ಕೋಟ್ಯಂತರ ಅಕ್ರಮ ಆಸ್ತಿ ಪತ್ತೆ

ಉಡುಪಿ: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ವಿರುದ್ಧ ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಗ್ರಹಿಸಿರುವ ಆರೋಪದ…

14 hours ago

ಜೋಯಿಡಾದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಸರ್ಕಾರಿ…

1 day ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

4 days ago