Latest

ಇ.ಡಿ ಹಾಗೂ ಸಿಬಿಐ ಅಧಿಕಾರಿಗಳಂತೆ ನಟನೆ:₹88 ಲಕ್ಷ ವಂಚನೆಗೆ ವ್ಯಕ್ತಿ ಬಲಿ

ಬಳ್ಳಾರಿ: ಖದೀಮರು ಡಿಜಿಟಲ್ ಅರೆಸ್ಟ್ ನೆಪದಲ್ಲಿ ಸೆಣೆ ಹಾಕಿ ನಗರದ ನಿವೃತ್ತ ಸಿವಿಲ್ ಗುತ್ತಿಗೆದಾರರೊಬ್ಬರನ್ನು ₹88 ಲಕ್ಷಕ್ಕೂ ಅಧಿಕ ಹಣಕ್ಕೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿಯು ಬಳ್ಳಾರಿ ನಗರದ ಸೈಬರ್ ಅಪರಾಧ, ಆರ್ಥಿಕ ಅಪರಾಧ ಮತ್ತು ಮಾದಕದ್ರವ್ಯ ಠಾಣೆಗೆ ದೂರು ನೀಡಿದ್ದು, ಜುಲೈ 24ರಂದು ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತರು ಜುಲೈ 5ರಂದು ಅನೇಕ ಅಜ್ಞಾತ ಮೊಬೈಲ್ ನಂಬರ್‌ಗಳಿಂದ ಕರೆ ಮತ್ತು ವಿಡಿಯೊ ಕರೆಗಳನ್ನು ಪಡೆದಿದ್ದಾರೆ. ಕರೆ ಮಾಡಿದವರು ತಾವು ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರ ತನಿಖಾ ದಳ (CBI) ಅಧಿಕಾರಿಗಳೆಂದು ಸುಳ್ಳು ಪರಿಚಯ ನೀಡಿ, ಭಯ ಮೂಡಿಸಿದ್ದಾರೆ.

“ಜೆಟ್ ಏರ್‌ವೇಸ್‌ನ ಮಾಜಿ ಮುಖ್ಯಸ್ಥ ನರೇಶ್ ಗೊಯೆಲ್ ₹200 ಕೋಟಿಯ ಹಗರಣ ಮಾಡಿದ್ದಾರೆ. ಅವರ ನಿವಾಸದಲ್ಲಿ ನಿಮ್ಮ ಎಟಿಎಂ ಕಾರ್ಡ್ ಪತ್ತೆಯಾಗಿದ್ದು, ಅದರಿಂದ ₹2 ಕೋಟಿ ವರ್ಗಾವಣೆ ಮಾಡಲಾಗಿದೆ. ಈ ಹಣದ ವ್ಯವಹಾರದಲ್ಲಿ ನೀವು ₹25 ಲಕ್ಷ ಕಮಿಷನ್ ಪಡೆದಿದ್ದೀರಿ. ವೈಯಕ್ತಿಕ ಮಾಹಿತಿಯನ್ನು ಮಾರಾಟ ಮಾಡಿದ್ದೀರಿ. ನಿಮ್ಮ ವಿರುದ್ಧ ಬಂಧನ ವಾರೆಂಟ್ ಇದೆ” ಎಂದು ಹೇಳಿ, ವಾಟ್ಸಾಪ್‌ ಮೂಲಕ ನಕಲಿ ವಾರಂಟ್ ಕಳುಹಿಸಿ ಬೆದರಿಸಿದ್ದಾರೆ.

ಜುಲೈ 7ರಂದು ಮತ್ತೊಮ್ಮೆ ಕರೆ ಮಾಡಿದ ವಂಚಕರು, “ನಿಮ್ಮನ್ನು ಮುಂಬೈನ ಸಿಬಿಐ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ವಿಚಾರಣೆ ಮುಗಿಯುವವರೆಗೂ ನಾವು ಸೂಚಿಸುವ ಖಾತೆಗಳಿಗೆ ಹಣ ಜಮಾ ಮಾಡಬೇಕು” ಎಂದು ಹೇಳಿದ್ದಾರೆ. ವಂಚಿತರು ಭಯಪಟ್ಟು ಜುಲೈ 19ರವರೆಗೆ ಹಂತ ಹಂತವಾಗಿ ₹88,20,098 ರುಪಾಯಿ ಜಮೆ ಮಾಡಿದ್ದಾರೆ.

ಹೆಚ್ಚಾಗಿ ಹಣ ಕಳೆದುಕೊಂಡ ಬಳಿಕ ಇದೊಂದು ದೊಡ್ಡ ವಂಚನೆ ಎಂದು ಗ್ರಹಿಸಿದ ಸಂತ್ರಸ್ತರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago