ಬಳ್ಳಾರಿ: ಖದೀಮರು ಡಿಜಿಟಲ್ ಅರೆಸ್ಟ್ ನೆಪದಲ್ಲಿ ಸೆಣೆ ಹಾಕಿ ನಗರದ ನಿವೃತ್ತ ಸಿವಿಲ್ ಗುತ್ತಿಗೆದಾರರೊಬ್ಬರನ್ನು ₹88 ಲಕ್ಷಕ್ಕೂ ಅಧಿಕ ಹಣಕ್ಕೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿಯು ಬಳ್ಳಾರಿ ನಗರದ ಸೈಬರ್ ಅಪರಾಧ, ಆರ್ಥಿಕ ಅಪರಾಧ ಮತ್ತು ಮಾದಕದ್ರವ್ಯ ಠಾಣೆಗೆ ದೂರು ನೀಡಿದ್ದು, ಜುಲೈ 24ರಂದು ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತರು ಜುಲೈ 5ರಂದು ಅನೇಕ ಅಜ್ಞಾತ ಮೊಬೈಲ್ ನಂಬರ್ಗಳಿಂದ ಕರೆ ಮತ್ತು ವಿಡಿಯೊ ಕರೆಗಳನ್ನು ಪಡೆದಿದ್ದಾರೆ. ಕರೆ ಮಾಡಿದವರು ತಾವು ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರ ತನಿಖಾ ದಳ (CBI) ಅಧಿಕಾರಿಗಳೆಂದು ಸುಳ್ಳು ಪರಿಚಯ ನೀಡಿ, ಭಯ ಮೂಡಿಸಿದ್ದಾರೆ.
“ಜೆಟ್ ಏರ್ವೇಸ್ನ ಮಾಜಿ ಮುಖ್ಯಸ್ಥ ನರೇಶ್ ಗೊಯೆಲ್ ₹200 ಕೋಟಿಯ ಹಗರಣ ಮಾಡಿದ್ದಾರೆ. ಅವರ ನಿವಾಸದಲ್ಲಿ ನಿಮ್ಮ ಎಟಿಎಂ ಕಾರ್ಡ್ ಪತ್ತೆಯಾಗಿದ್ದು, ಅದರಿಂದ ₹2 ಕೋಟಿ ವರ್ಗಾವಣೆ ಮಾಡಲಾಗಿದೆ. ಈ ಹಣದ ವ್ಯವಹಾರದಲ್ಲಿ ನೀವು ₹25 ಲಕ್ಷ ಕಮಿಷನ್ ಪಡೆದಿದ್ದೀರಿ. ವೈಯಕ್ತಿಕ ಮಾಹಿತಿಯನ್ನು ಮಾರಾಟ ಮಾಡಿದ್ದೀರಿ. ನಿಮ್ಮ ವಿರುದ್ಧ ಬಂಧನ ವಾರೆಂಟ್ ಇದೆ” ಎಂದು ಹೇಳಿ, ವಾಟ್ಸಾಪ್ ಮೂಲಕ ನಕಲಿ ವಾರಂಟ್ ಕಳುಹಿಸಿ ಬೆದರಿಸಿದ್ದಾರೆ.
ಜುಲೈ 7ರಂದು ಮತ್ತೊಮ್ಮೆ ಕರೆ ಮಾಡಿದ ವಂಚಕರು, “ನಿಮ್ಮನ್ನು ಮುಂಬೈನ ಸಿಬಿಐ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ವಿಚಾರಣೆ ಮುಗಿಯುವವರೆಗೂ ನಾವು ಸೂಚಿಸುವ ಖಾತೆಗಳಿಗೆ ಹಣ ಜಮಾ ಮಾಡಬೇಕು” ಎಂದು ಹೇಳಿದ್ದಾರೆ. ವಂಚಿತರು ಭಯಪಟ್ಟು ಜುಲೈ 19ರವರೆಗೆ ಹಂತ ಹಂತವಾಗಿ ₹88,20,098 ರುಪಾಯಿ ಜಮೆ ಮಾಡಿದ್ದಾರೆ.
ಹೆಚ್ಚಾಗಿ ಹಣ ಕಳೆದುಕೊಂಡ ಬಳಿಕ ಇದೊಂದು ದೊಡ್ಡ ವಂಚನೆ ಎಂದು ಗ್ರಹಿಸಿದ ಸಂತ್ರಸ್ತರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…