Latest

ಭಟ್ಕಳ ಮಾವಿನಕುರ್ವಾ ಬಂದರುದಲ್ಲಿ ಅಂದರ್-ಬಾಹರ್ ಜೂಜಾಟ: ಎಂಟು ಮಂದಿ ಬಂಧನ, ಲಕ್ಷಾಂತರದ ಸೊತ್ತು ವಶಕ್ಕೆ

ಭಟ್ಕಳ: ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರು ಪ್ರದೇಶದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಗಂಭೀರ ಮಾಲಿನ್ಯಕ್ಕೆ ಗುರಿಯಾಗಿರುವ ಈ ಪ್ರದೇಶದಲ್ಲಿ ಜೂಜು ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಭಟ್ಕಳ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ಹಲವು ಮಂದಿ ಜೂಜುಕೋರರು ಓಡಿ ಹೋಗಿದ್ದಾರೆ. ಆದರೆ, ಎಂಟು ಮಂದಿ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಬಂಧಿತರಲ್ಲಿ ಮಾವಿನಕುರ್ವಾ ನಿವಾಸಿಗಳಾದ ರಾಘವೇಂದ್ರ ವೀರಮಾಸ್ತಿ, ನಾಗೇಶ ಖಾರ್ವಿ, ಶ್ರೀನಿವಾಸ ಖಾರ್ವಿ, ಗೋವಿಂದ ಖಾರ್ವಿ, ಪಾಂಡುರಂಗ ಖಾರ್ವಿ ಹಾಗೂ ಶಿರಾಲಿಯ ಮೋಹನ್ ದೇವಾಡಿಗ, ಟಗರು ರಸ್ತೆಯ ಸನಾವುಲ್ಲಾ ಭಾಷಾ ಸೇರಿದ್ದಾರೆ.

ದಾಳಿಯ ವೇಳೆ ಆರೋಪಿಗಳಿಂದ ನಾಲ್ಕು ಬೈಕುಗಳು ಹಾಗೂ ನಗದು ರೂ. 4,938 ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ಸುಮಾರು 2 ಲಕ್ಷ ರೂಪಾಯಿಗಳಷ್ಟಾಗುತ್ತದೆ ಎಂದು ಅಂದಾಜಿಸಲಾಗಿದೆ.

ಪೊಲೀಸರು ಈಗಾಗಲೇ ಓಡಿ ಹೋಗಿರುವ ಇತರ ಜೂಜುಕೋರರ ಪತ್ತೆಗೆ ಬಲೆ ಬೀಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಮುಂದುವರಿದಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

17 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

17 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

17 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

17 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

22 hours ago