ಭಟ್ಕಳ: ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರು ಪ್ರದೇಶದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಗಂಭೀರ ಮಾಲಿನ್ಯಕ್ಕೆ ಗುರಿಯಾಗಿರುವ ಈ ಪ್ರದೇಶದಲ್ಲಿ ಜೂಜು ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಭಟ್ಕಳ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ಹಲವು ಮಂದಿ ಜೂಜುಕೋರರು ಓಡಿ ಹೋಗಿದ್ದಾರೆ. ಆದರೆ, ಎಂಟು ಮಂದಿ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಬಂಧಿತರಲ್ಲಿ ಮಾವಿನಕುರ್ವಾ ನಿವಾಸಿಗಳಾದ ರಾಘವೇಂದ್ರ ವೀರಮಾಸ್ತಿ, ನಾಗೇಶ ಖಾರ್ವಿ, ಶ್ರೀನಿವಾಸ ಖಾರ್ವಿ, ಗೋವಿಂದ ಖಾರ್ವಿ, ಪಾಂಡುರಂಗ ಖಾರ್ವಿ ಹಾಗೂ ಶಿರಾಲಿಯ ಮೋಹನ್ ದೇವಾಡಿಗ, ಟಗರು ರಸ್ತೆಯ ಸನಾವುಲ್ಲಾ ಭಾಷಾ ಸೇರಿದ್ದಾರೆ.
ದಾಳಿಯ ವೇಳೆ ಆರೋಪಿಗಳಿಂದ ನಾಲ್ಕು ಬೈಕುಗಳು ಹಾಗೂ ನಗದು ರೂ. 4,938 ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ಸುಮಾರು 2 ಲಕ್ಷ ರೂಪಾಯಿಗಳಷ್ಟಾಗುತ್ತದೆ ಎಂದು ಅಂದಾಜಿಸಲಾಗಿದೆ.
ಪೊಲೀಸರು ಈಗಾಗಲೇ ಓಡಿ ಹೋಗಿರುವ ಇತರ ಜೂಜುಕೋರರ ಪತ್ತೆಗೆ ಬಲೆ ಬೀಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…