ಭಟ್ಕಳ: ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರು ಪ್ರದೇಶದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಗಂಭೀರ ಮಾಲಿನ್ಯಕ್ಕೆ ಗುರಿಯಾಗಿರುವ ಈ ಪ್ರದೇಶದಲ್ಲಿ ಜೂಜು ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಭಟ್ಕಳ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ಹಲವು ಮಂದಿ ಜೂಜುಕೋರರು ಓಡಿ ಹೋಗಿದ್ದಾರೆ. ಆದರೆ, ಎಂಟು ಮಂದಿ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಬಂಧಿತರಲ್ಲಿ ಮಾವಿನಕುರ್ವಾ ನಿವಾಸಿಗಳಾದ ರಾಘವೇಂದ್ರ ವೀರಮಾಸ್ತಿ, ನಾಗೇಶ ಖಾರ್ವಿ, ಶ್ರೀನಿವಾಸ ಖಾರ್ವಿ, ಗೋವಿಂದ ಖಾರ್ವಿ, ಪಾಂಡುರಂಗ ಖಾರ್ವಿ ಹಾಗೂ ಶಿರಾಲಿಯ ಮೋಹನ್ ದೇವಾಡಿಗ, ಟಗರು ರಸ್ತೆಯ ಸನಾವುಲ್ಲಾ ಭಾಷಾ ಸೇರಿದ್ದಾರೆ.
ದಾಳಿಯ ವೇಳೆ ಆರೋಪಿಗಳಿಂದ ನಾಲ್ಕು ಬೈಕುಗಳು ಹಾಗೂ ನಗದು ರೂ. 4,938 ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ಸುಮಾರು 2 ಲಕ್ಷ ರೂಪಾಯಿಗಳಷ್ಟಾಗುತ್ತದೆ ಎಂದು ಅಂದಾಜಿಸಲಾಗಿದೆ.
ಪೊಲೀಸರು ಈಗಾಗಲೇ ಓಡಿ ಹೋಗಿರುವ ಇತರ ಜೂಜುಕೋರರ ಪತ್ತೆಗೆ ಬಲೆ ಬೀಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಮುಂದುವರಿದಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…