Latest

ನಂಜನಗೂಡಿನಲ್ಲಿ ನುಂಗಣ್ಣ ಹಾಗೂ ಭ್ರಷ್ಟ ಪಿಡಿಒ ವಿರುದ್ಧ ಅನ್ನದಾತರ ಆಕ್ರೋಶ

ನಂಜನಗೂಡು :ನಂಜನಗೂಡು ತಾಲೂಕು ಹೆಗ್ಗಡಹಳ್ಳಿ ಹಾಗೂ ಯಡಿಯಾಲ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭ್ರಷ್ಟ ಪಿಡಿಒ ನಾಗರಾಜು ಎಂಬುವವರನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿಸಿ ಏಕೀಕರಣದ ಹಾದಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ನಂಜನಗೂಡು ತಾಲೂಕು ಪಂಚಾಯಿತಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಭ್ರಷ್ಟ ಪಿಡಿಓ ರನ್ನು ಕೂಡಲೆ ಅಮಾನತುಗೊಳಿಸುವಂತೆ ಒತ್ತಾಯಿಸಿ ಆತನ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಳಿಕ ಅವರು ಮಾತನಾಡಿ ಯಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾರ್ವತಿಪುರ ಗ್ರಾಮದ ವೃದ್ಧ ಮಹಿಳೆ ಮಾರಿಯಮ್ಮ ಎಂಬುವವರ ಜಾಗಕ್ಕೆ ಸಂಬಂಧಿಸಿದಂತೆ 11 ಬಿ ನೀಡಿ ಖಾತೆ ಮಾಡಿಸಿಕೊಡಲು 25,000 ಪಡೆದಿರುತ್ತಾರೆ .ಆಕೆಯಿಂದ ಲಂಚದ ಹಣ ಪಡೆದಿದ್ದರೂ ಸಹ ಅದೇ ಜಾಗವನ್ನು ಬೇರೆಯವರ ಹೆಸರಿಗೆ ಖಾತೆ ಮಾಡಿಕೊಟ್ಟು ವಂಚನೆ ಮಾಡಿರುತ್ತಾರೆ.ಅಲ್ಲದೆ ಯಡಿಯಾಲ ಗ್ರಾಮದಲ್ಲಿ ಕನಕ ಭವನಕ್ಕೆ ಸೇರಬೇಕಾದ ಜಾಗವನ್ನು ಹಣಕ್ಕಾಗಿ ಬೇರೆ ವ್ಯಕ್ತಿಗೆ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಮಾಡಿದರು.ಈ ಹಿಂದೆ ಕಳಲೆ ಗ್ರಾಮ ಪಂಚಾಯಿತಿಯಲ್ಲೂ ಕೂಡ ಹಲವರು ಭ್ರಷ್ಟಾಚಾರಗಳನ್ನು ಮಾಡಿ ಬಂದಿದ್ದಾರೆ .ಪ್ರಸ್ತುತ ಈಗ ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕೂಡ ಸರ್ಕಾರಿ ರಸ್ತೆಯನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಟ್ಟಿರುವುದು ಗಮನಕ್ಕೆ ಬಂದಿದ್ದು ಈ ವ್ಯಕ್ತಿ ಯಾವುದೇ ಪಂಚಾಯತಿಗೆ ಹೋದರು ಹೋದ ಕಡೆಯೆಲ್ಲ ಭ್ರಷ್ಟಾಚಾರ, ಅಕ್ರಮ ಮಾಡುವುದು ಮಾಮೂಲಿಯಾಗಿದೆ ಎಂದು ಆರೋಪಿಸಿದರು .ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ ಮಹದೇವಪ್ಪ ಹಾಗೂ ನಾನು ಇಬ್ಬರು ಒಂದೇ ಗ್ರಾಮದವರಾಗಿದ್ದು ಆತ್ಮೀಯರಾಗಿದ್ದೇವೆ ನಾನು ಏನೇ ಮಾಡಿದರು ಅವರ ಬೆಂಬಲ ಇದೆ ಎನ್ನುವ ಉಡಾಫೆ ಮಾತುಗಳನ್ನಾಡುತ್ತಾ ರಾಜಕಾರಣಿಯಂತೆ ಮೆರೆಯುತ್ತಾನೆ ಎಂದು ಆರೋಪಿಸಿದ ಅವರು ಉಸ್ತುವಾರಿ ಸಚಿವರೇ ಇಂತಹ ಪಿಡಿಒಗಳು ನಂಜನಗೂಡಿಗೆ ಅವಶ್ಯಕತೆ ಇಲ್ಲ ಬಡವರ ರಕ್ತ ಹೀರುವ ಹಾಗೂ ಸರ್ಕಾರಿ ಜಾಗಗಳನ್ನು ಮಾರಾಟ ಮಾಡುವ ಇಂತಹ ಬ್ರಷ್ಟ ಪಿಡಿಒಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು .ಒಂದು ವೇಳೆ ಇವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆ ವತಿಯಿಂದ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು.
ನಂತರ ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಗ್ರಾಮ ಪಂಚಾಯತಿಗಳಲ್ಲಿಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಪಿಡಿಒಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಸಾರ್ವಜನಿಕರ ರಸ್ತೆಗಳನ್ನು ಬೇರೆಯವರ ಹೆಸರಿಗೆ ಅಕ್ರಮ ಖಾತೆ ಮಾಡಿಕೊಡುತ್ತಿದ್ದಾರೆ ಇವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿದರು .
ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜಲಾಲ್ಡ್ ಭೇಟಿ ನೀಡಿ ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸಿ ಸ್ಥಳಕ್ಕೆ ಪಿಡಿಒ ನಾಗರಾಜ್ ಅವರನ್ನು ಕರೆಯಿಸಿ ರೈತರ ಆರೋಪದ ಸಂಬಂಧ ವಿಚಾರಣೆ ನಡೆಸಿ ನಂತರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಕೈ ಬಿಡಲಾಯಿತು .
ಪ್ರತಿಭಟನೆಯಲ್ಲಿ ರೈತ ಮುಖಂಡರುಗಳಾದ ಹಿಮ್ಮಾವು ರಘು,ಶ್ವೇತಾ, ದೇವರಾಜು, ರವಿ, ಶಂಕರ್ ನಾಯ್ಕ, ಮಹಾದೇವನಾಯಕ, ಮಹಾದೇವಸ್ವಾಮಿ, ಪ್ರಕಾಶ್ ,ಆನಂದ್, ಸಿದ್ದರಾಜು ,ಮಹೇಶ್, ಶಿವಕುಮಾರ್, ಸಂತ್ರಸ್ತ ಮಹಿಳೆ ಮಾರಿಯಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

ಭ್ರಷ್ಟ ಪಿಡಿಒ ಗೆ ಎರಡೆರಡು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ಯೋಗ ಇದರಿಂದಾಗಿ ನಾಗರಾಜ್ ಪ್ರಸ್ತುತ ನಂಜನಗೂಡು ತಾಲೂಕಿನ ಹೆಗ್ಗಡಳ್ಳಿ ಹಾಗೂ ಯಡಿಯಾಲ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎರಡೂ ಪಂಚಾಯಿತಿಗಳಲ್ಲಿ ಸಾಕಷ್ಟು ಹಗರಣಗಳನ್ನು ಮಾಡಿ ಭ್ರಷ್ಟತೆಗೆ ಹೆಸರುವಾಸಿಯಾಗಿದ್ದಾರೆ .ಕೇವಲ ಹಾಜರಾತಿಗೆ ಸಹಿ ಮಾಡಿ ಹೊರಟು ತನ್ನ ಸ್ವಂತ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಇವರು ಸಾರ್ವಜನಿಕ ಕೆಲಸಗಳಿಗೆ ಸಿಗುವುದಿಲ್ಲ ಈ ಪಂಚಾಯಿತಿಯಲ್ಲಿ ಕೇಳಿದರೆ ಆ ಪಂಚಾಯಿತಿ ಆ ಪಂಚಾಯಿತಿಗೆ ಕೇಳಿದರೆ ಈ ಪಂಚಾಯಿತಿ ಎಂದು ಹೇಳಿಕೊಂಡೆ ಭ್ರಷ್ಟಾಚಾರ ನಡೆಸುತ್ತಿರುವ ಇವರಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದಾದರೂ ಒಂದು ಪಂಚಾಯತಿ ಜವಾಬ್ದಾರಿ ನೀಡಿ ಇವರ ಭ್ರಷ್ಟಾಚಾರ ಹಾಗೂ ಅಕ್ರಮ ಸಂಪಾದನೆಗೆ ಕಡಿವಾಣ ಹಾಕಬೇಕು.ಸರ್ಕಾರಿ ಜಾಗಗಳನ್ನು ಹಣಕ್ಕಾಗಿ ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿ ಕೊಡುವುದು ಸರ್ಕಾರಿ ಹಣ ದುರುಪಯೋಗ ಹಾಗೂ ಕಾಮಗಾರಿ ಮಾಡದೆ ಇಂಜಿನಿಯರ್ ಹಾಗೂ ಗುತ್ತಿಗೆದಾರರ ಜೊತೆ ಶಾಮೀಲಾಗಿ ಕಳ್ಳಬಿಲ್ ಮಾಡುವುದು ಇವರಿಗೆ ಕರಗತವಾಗಿದೆ .ಈ ಹಿಂದೆ ಕೂಡ ಯಡಿಯಾಲ ಗ್ರಾಮ ಪಂಚಾಯತಿಯಲ್ಲಿ ಇವರ ಅಕ್ರಮ ಹಾಗೂ ಭ್ರಷ್ಟಾಚಾರದ ಬಗ್ಗೆ ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ಸುದ್ದಿ ಮಾಡಲಾಗಿತ್ತು ” ವರದಿ: ಮೋಹನ್

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

12 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

14 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

14 hours ago