Latest

ಪೆನ್ ಹಿಡಿದು ಬರೆಯಬೇಕಾದ ಮಕ್ಕಳ ಕೈಯಲ್ಲಿ, ಗುದಲಿ ಕೊಟ್ಟು ಚರಂಡಿ ಕ್ಲೀನ್ ಮಾಡಿಸಿದ ಹೆಡ್ ಮಾಸ್ಟರ್!

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿವಾದಾತ್ಮಕ ಘಟನೆ  ಹಿನ್ನಲೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಅವರು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಶಾಲಾ ಆವರಣದ ಬಳಿ ಪಾಚಿ ತುಂಬಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಘಟನೆ ನಡೆದಿದ್ದು, ಇದಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಕೈಯಲ್ಲಿ ಗದ್ದಲಿ, ಚರಂಡಿ ಸ್ವಚ್ಛಗೊಳನೆ

ಪೆನ್ ಹಿಡಿದು ಓದಲು ಬರೆಯಬೇಕಾದ ಮಕ್ಕಳ ಕೈಯಲ್ಲಿ ಗದ್ದಲಿ, ತೊಟ್ಟಿ ನೀಡಿ, ಪಾಚಿ ತುಂಬಿದ ಚರಂಡಿ ಸ್ವಚ್ಛಗೊಳಿಸುವಂತೆ ಮುಖ್ಯೋಪಾಧ್ಯಾಯರು ನಿರ್ದೇಶಿಸಿದರೆಂದು ಪೋಷಕರು ಆಕ್ಷೇಪಿಸಿದ್ದಾರೆ. ಗಬ್ಬು ನಾರುತ್ತಿದ್ದ ಚರಂಡಿಯನ್ನು ಶಾಲಾ ಮಕ್ಕಳ ಮೂಲಕ ಒರೆಸಿಸಿದ ದೃಶ್ಯಗಳು ಸಾರ್ವಜನಿಕರು ಕಂಡಿದ್ದು, ಈ ಸಂಬಂಧ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಪೋಷಕರ ಆಕ್ರೋಶ, ಗ್ರಾಮಸ್ಥರ ಪ್ರತಿಭಟನೆ

ಮಕ್ಕಳು ಶಾಲೆಗೆ ಓದಲು ಹೋಗುವ ಬದಲು ಬಯಲಲ್ಲಿ ಹೊಟ್ಟೆತುಂಬಿಸಲು ಹೋಗುವವರಂತೆ ಶ್ರಮ ತೆಗೆದುಕೊಳ್ಳುತ್ತಿರುವ ದೃಶ್ಯ ಪೋಷಕರನ್ನು ಕಳವಳಗೊಳಿಸಿದೆ. ಈ ಬಗ್ಗೆ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡು, ಇದನ್ನು ಖಂಡಿಸಿದ್ದಾರೆ. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಆಡಳಿತಕ್ಕೆ ಸೇರಿದ್ದು, ಮಕ್ಕಳಿಗೆ ಈ ರೀತಿಯ ಕೆಲಸ ಕೊಡಿಸುವುದು ತೀರ್ವ ಖಂಡನೀಯ ಎಂದು ಅವರು ಹೇಳಿದ್ದಾರೆ.

ಪ್ರಶಾಸನದ ಪ್ರತಿಕ್ರಿಯೆ ನಿರೀಕ್ಷೆ

ಈ ವಿಷಯ ಈಗ ಶಿಕ್ಷಣ ಇಲಾಖೆಯ ಗಮನಕ್ಕೂ ತಲುಪಿದ್ದು, ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂಬುದರ ಬಗ್ಗೆ ಎಲ್ಲರೂ ಕಾದು ನೋಡುತ್ತಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಅವರ ಶಿಕ್ಷಣದ ಹಿತವನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

4 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

5 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

7 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

15 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

15 hours ago