Latest

ಪೆನ್ ಹಿಡಿದು ಬರೆಯಬೇಕಾದ ಮಕ್ಕಳ ಕೈಯಲ್ಲಿ, ಗುದಲಿ ಕೊಟ್ಟು ಚರಂಡಿ ಕ್ಲೀನ್ ಮಾಡಿಸಿದ ಹೆಡ್ ಮಾಸ್ಟರ್!

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿವಾದಾತ್ಮಕ ಘಟನೆ  ಹಿನ್ನಲೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಅವರು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಶಾಲಾ ಆವರಣದ ಬಳಿ ಪಾಚಿ ತುಂಬಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಘಟನೆ ನಡೆದಿದ್ದು, ಇದಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಕೈಯಲ್ಲಿ ಗದ್ದಲಿ, ಚರಂಡಿ ಸ್ವಚ್ಛಗೊಳನೆ

ಪೆನ್ ಹಿಡಿದು ಓದಲು ಬರೆಯಬೇಕಾದ ಮಕ್ಕಳ ಕೈಯಲ್ಲಿ ಗದ್ದಲಿ, ತೊಟ್ಟಿ ನೀಡಿ, ಪಾಚಿ ತುಂಬಿದ ಚರಂಡಿ ಸ್ವಚ್ಛಗೊಳಿಸುವಂತೆ ಮುಖ್ಯೋಪಾಧ್ಯಾಯರು ನಿರ್ದೇಶಿಸಿದರೆಂದು ಪೋಷಕರು ಆಕ್ಷೇಪಿಸಿದ್ದಾರೆ. ಗಬ್ಬು ನಾರುತ್ತಿದ್ದ ಚರಂಡಿಯನ್ನು ಶಾಲಾ ಮಕ್ಕಳ ಮೂಲಕ ಒರೆಸಿಸಿದ ದೃಶ್ಯಗಳು ಸಾರ್ವಜನಿಕರು ಕಂಡಿದ್ದು, ಈ ಸಂಬಂಧ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಪೋಷಕರ ಆಕ್ರೋಶ, ಗ್ರಾಮಸ್ಥರ ಪ್ರತಿಭಟನೆ

ಮಕ್ಕಳು ಶಾಲೆಗೆ ಓದಲು ಹೋಗುವ ಬದಲು ಬಯಲಲ್ಲಿ ಹೊಟ್ಟೆತುಂಬಿಸಲು ಹೋಗುವವರಂತೆ ಶ್ರಮ ತೆಗೆದುಕೊಳ್ಳುತ್ತಿರುವ ದೃಶ್ಯ ಪೋಷಕರನ್ನು ಕಳವಳಗೊಳಿಸಿದೆ. ಈ ಬಗ್ಗೆ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡು, ಇದನ್ನು ಖಂಡಿಸಿದ್ದಾರೆ. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಆಡಳಿತಕ್ಕೆ ಸೇರಿದ್ದು, ಮಕ್ಕಳಿಗೆ ಈ ರೀತಿಯ ಕೆಲಸ ಕೊಡಿಸುವುದು ತೀರ್ವ ಖಂಡನೀಯ ಎಂದು ಅವರು ಹೇಳಿದ್ದಾರೆ.

ಪ್ರಶಾಸನದ ಪ್ರತಿಕ್ರಿಯೆ ನಿರೀಕ್ಷೆ

ಈ ವಿಷಯ ಈಗ ಶಿಕ್ಷಣ ಇಲಾಖೆಯ ಗಮನಕ್ಕೂ ತಲುಪಿದ್ದು, ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂಬುದರ ಬಗ್ಗೆ ಎಲ್ಲರೂ ಕಾದು ನೋಡುತ್ತಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಅವರ ಶಿಕ್ಷಣದ ಹಿತವನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

12 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

14 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

14 hours ago