ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿವಾದಾತ್ಮಕ ಘಟನೆ ಹಿನ್ನಲೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಅವರು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಶಾಲಾ ಆವರಣದ ಬಳಿ ಪಾಚಿ ತುಂಬಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಘಟನೆ ನಡೆದಿದ್ದು, ಇದಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಕ್ಕಳ ಕೈಯಲ್ಲಿ ಗದ್ದಲಿ, ಚರಂಡಿ ಸ್ವಚ್ಛಗೊಳನೆ
ಪೆನ್ ಹಿಡಿದು ಓದಲು ಬರೆಯಬೇಕಾದ ಮಕ್ಕಳ ಕೈಯಲ್ಲಿ ಗದ್ದಲಿ, ತೊಟ್ಟಿ ನೀಡಿ, ಪಾಚಿ ತುಂಬಿದ ಚರಂಡಿ ಸ್ವಚ್ಛಗೊಳಿಸುವಂತೆ ಮುಖ್ಯೋಪಾಧ್ಯಾಯರು ನಿರ್ದೇಶಿಸಿದರೆಂದು ಪೋಷಕರು ಆಕ್ಷೇಪಿಸಿದ್ದಾರೆ. ಗಬ್ಬು ನಾರುತ್ತಿದ್ದ ಚರಂಡಿಯನ್ನು ಶಾಲಾ ಮಕ್ಕಳ ಮೂಲಕ ಒರೆಸಿಸಿದ ದೃಶ್ಯಗಳು ಸಾರ್ವಜನಿಕರು ಕಂಡಿದ್ದು, ಈ ಸಂಬಂಧ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಪೋಷಕರ ಆಕ್ರೋಶ, ಗ್ರಾಮಸ್ಥರ ಪ್ರತಿಭಟನೆ
ಮಕ್ಕಳು ಶಾಲೆಗೆ ಓದಲು ಹೋಗುವ ಬದಲು ಬಯಲಲ್ಲಿ ಹೊಟ್ಟೆತುಂಬಿಸಲು ಹೋಗುವವರಂತೆ ಶ್ರಮ ತೆಗೆದುಕೊಳ್ಳುತ್ತಿರುವ ದೃಶ್ಯ ಪೋಷಕರನ್ನು ಕಳವಳಗೊಳಿಸಿದೆ. ಈ ಬಗ್ಗೆ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡು, ಇದನ್ನು ಖಂಡಿಸಿದ್ದಾರೆ. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಆಡಳಿತಕ್ಕೆ ಸೇರಿದ್ದು, ಮಕ್ಕಳಿಗೆ ಈ ರೀತಿಯ ಕೆಲಸ ಕೊಡಿಸುವುದು ತೀರ್ವ ಖಂಡನೀಯ ಎಂದು ಅವರು ಹೇಳಿದ್ದಾರೆ.
ಪ್ರಶಾಸನದ ಪ್ರತಿಕ್ರಿಯೆ ನಿರೀಕ್ಷೆ
ಈ ವಿಷಯ ಈಗ ಶಿಕ್ಷಣ ಇಲಾಖೆಯ ಗಮನಕ್ಕೂ ತಲುಪಿದ್ದು, ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂಬುದರ ಬಗ್ಗೆ ಎಲ್ಲರೂ ಕಾದು ನೋಡುತ್ತಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಅವರ ಶಿಕ್ಷಣದ ಹಿತವನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…