Latest

ಶಾಲೆಗೆ ಸರಿಯಾಗಿ ಪೂರೈಕೆಯಾಗದ ನೀರು; ರಸ್ತೆ ತಡೆದು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು..!

ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಇಡೀ ಗ್ರಾಮಕ್ಕೆ ಹಾಗೂ ಶಾಲೆಗೆ ಕಳೆದ ಒಂದು ತಿಂಗಳಿನಿಂದ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ ಇದರಿಂದ ಮಧ್ಯಾಹ್ನದ ಬಿಸಿ ಊಟಕ್ಕೂ ಸಹ ತೊಂದರೆಯಾಗುತ್ತಿದ್ದು ಅದನ್ನು ಸರಿಪಡಿಸುವಂತೆ ಇದೇ ತಿಂಗಳು 15ನೇ ತಾರೀಕಿನಂದು ಊರಿನ ಗ್ರಾಮಸ್ಥರು ಹಾಗೂ ಎಸ್ ಡಿ ಎಮ್ ಸಿಯವರು ಇದನ್ನು ಸರಿಪಡಿಸುವಂತೆ ಗ್ರಾಮ ಪಂಚಾಯಿತಿಯವರಿಗೆ ಮನವಿಯನ್ನು ಸಲ್ಲಿಸಿದ್ದರು.ಆದರೂ ಸಹ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮವನ್ನು ಕೈಗೊಳ್ಳದ ಕಾರಣ ಇಂದು ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ತಡೆದು ರಸ್ತೆಯಲ್ಲೇ ಕುಳಿತು ಖಾಲಿ ಬಿಂದಿಗೆ ಹಿಡಿದು ನೀರಿಗಾಗಿ ಗ್ರಾಮ ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸಿದರು..
ಘಟನೆ ತಿಳಿದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎರಡು ದಿನಗಳಲ್ಲಿ ಸಮಸ್ಯೆ ಬಗ್ಗೆ ಹರಿಸುವುದಾಗಿ ತಿಳಿಸಿ, ಶಾಲೆಗೆ ಟ್ಯಾಂಕರ್ ನಿಂದ ನೀರಿನ ವ್ಯವಸ್ಥೆ ಮಾಡಿಸಿದರು ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಿಲ್ಲಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹೇಳೋದೇನು..?ಈ ಬಗ್ಗೆ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಾನು ನಿನ್ನೆಯಷ್ಟೇ ಜಾರ್ಜನ್ನು ಪಡೆದುಕೊಂಡಿದ್ದು ಈ ಕುರಿತು ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ ಗ್ರಾಮದಲ್ಲಿ ಪೈಪ್ಲೈನ್ ವ್ಯವಸ್ಥೆ ಹಾಳಾಗಿದ್ದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳೊಂದಿಗೆ ಮಾತನಾಡಿದ್ದು ಸಮಸ್ಯೆಯನ್ನು ಎರಡ್ಮೂರು ದಿನಗಳಲ್ಲಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ವರದಿ:ಮಂಜುನಾಥ ಎಫ್ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago