Latest

ಶಾಲೆಗೆ ಸರಿಯಾಗಿ ಪೂರೈಕೆಯಾಗದ ನೀರು; ರಸ್ತೆ ತಡೆದು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು..!

ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಇಡೀ ಗ್ರಾಮಕ್ಕೆ ಹಾಗೂ ಶಾಲೆಗೆ ಕಳೆದ ಒಂದು ತಿಂಗಳಿನಿಂದ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ ಇದರಿಂದ ಮಧ್ಯಾಹ್ನದ ಬಿಸಿ ಊಟಕ್ಕೂ ಸಹ ತೊಂದರೆಯಾಗುತ್ತಿದ್ದು ಅದನ್ನು ಸರಿಪಡಿಸುವಂತೆ ಇದೇ ತಿಂಗಳು 15ನೇ ತಾರೀಕಿನಂದು ಊರಿನ ಗ್ರಾಮಸ್ಥರು ಹಾಗೂ ಎಸ್ ಡಿ ಎಮ್ ಸಿಯವರು ಇದನ್ನು ಸರಿಪಡಿಸುವಂತೆ ಗ್ರಾಮ ಪಂಚಾಯಿತಿಯವರಿಗೆ ಮನವಿಯನ್ನು ಸಲ್ಲಿಸಿದ್ದರು.ಆದರೂ ಸಹ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮವನ್ನು ಕೈಗೊಳ್ಳದ ಕಾರಣ ಇಂದು ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿಯನ್ನು ತಡೆದು ರಸ್ತೆಯಲ್ಲೇ ಕುಳಿತು ಖಾಲಿ ಬಿಂದಿಗೆ ಹಿಡಿದು ನೀರಿಗಾಗಿ ಗ್ರಾಮ ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸಿದರು..
ಘಟನೆ ತಿಳಿದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎರಡು ದಿನಗಳಲ್ಲಿ ಸಮಸ್ಯೆ ಬಗ್ಗೆ ಹರಿಸುವುದಾಗಿ ತಿಳಿಸಿ, ಶಾಲೆಗೆ ಟ್ಯಾಂಕರ್ ನಿಂದ ನೀರಿನ ವ್ಯವಸ್ಥೆ ಮಾಡಿಸಿದರು ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಿಲ್ಲಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹೇಳೋದೇನು..?ಈ ಬಗ್ಗೆ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಾನು ನಿನ್ನೆಯಷ್ಟೇ ಜಾರ್ಜನ್ನು ಪಡೆದುಕೊಂಡಿದ್ದು ಈ ಕುರಿತು ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ ಗ್ರಾಮದಲ್ಲಿ ಪೈಪ್ಲೈನ್ ವ್ಯವಸ್ಥೆ ಹಾಳಾಗಿದ್ದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳೊಂದಿಗೆ ಮಾತನಾಡಿದ್ದು ಸಮಸ್ಯೆಯನ್ನು ಎರಡ್ಮೂರು ದಿನಗಳಲ್ಲಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ವರದಿ:ಮಂಜುನಾಥ ಎಫ್ ಹರಿಜನ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 hour ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 hour ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

1 hour ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

1 hour ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

1 hour ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

1 hour ago