Categories: Latest

ನಾಯನೇಗಲಿಯಲ್ಲಿ ಪಿಕೆಪಿಎಸ್ ಬ್ಯಾಂಕ್ ನೂತನ ಕಚೇರಿ ಉದ್ಘಾಟನೆ: ರೈತರ ಹಿತಕ್ಕಾಗಿ ಸಂಘದ ಅಭಿವೃದ್ಧಿಗೆ ಒತ್ತು ನೀಡಿದ ಶಾಸಕ ಉಮೇಶ್ ಮೇಟಿ

ಬಾಗಲಕೋಟೆ: ತಾಲ್ಲೂಕಿನ ನಾಯನೇಗಲಿ ಗ್ರಾಮದಲ್ಲಿ ಪಿಕೆಪಿಎಸ್ ಬ್ಯಾಂಕ್‌ನ ನೂತನ ಕಚೇರಿಯನ್ನು ಇಂದು ಬೆಳಿಗ್ಗೆ 9.30 ಗಂಟೆಗೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ರೈತರ ಅಭಿವೃದ್ಧಿಗೆ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದ್ದು, ಆಡಳಿತ ಮಂಡಳಿ ಹಾಗೂ ಅಧ್ಯಕ್ಷರು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಘವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಂಘದ ಬೆಳವಣಿಗೆ ಹಾಗೂ ರೈತರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಿಕೆಪಿಎಸ್ ಆಡಳಿತ ಮಂಡಳಿ ಹಾಗೂ ಅಧ್ಯಕ್ಷರ ವತಿಯಿಂದ ಶಾಸಕ ಉಮೇಶ್ ಮೇಟಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಸಿದ್ದಲಿಂಗಯ್ಯ ಹಿರೇಮಠ ಗುರುಗಳು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸವಂತಪ್ಪ ಮೇಟಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಕೆಪಿಎಸ್ ಅಧ್ಯಕ್ಷ ಸಂಗಪ್ಪ ಚಲವಾದಿ ವಹಿಸಿದ್ದರು.

ಪಿಕೆಪಿಎಸ್ ಸಿಇಒ ಮನೋಹರ ಕೋಟಿ ವಂದನಾರ್ಪಣೆ ಸಲ್ಲಿಸಿದರೆ, ನಿರ್ದೇಶಕ ಆರ್.ಎಚ್. ಕುಲಕರ್ಣಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಪಿಕೆಪಿಎಸ್ ಉಪಾಧ್ಯಕ್ಷ ದುಂಡಪ್ಪ ವಾಲೀಕಾರ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ, ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ಡ್ರಗ್ಸ್ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಬಲವಂತವಾಗಿ ಮತಾಂತರಕ್ಕೆ ಯತ್ನ: ನಾಗ್ಪುರದಲ್ಲಿ IAF ಅಧಿಕಾರಿಯ ಪತ್ನಿಗೆ ಅಮಾನುಷ ಕಿರುಕುಳ

ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಸೇನೆಯ (IAF) ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ…

13 hours ago

ಕೆಮ್ಮಿನ ಸಿರಪ್ ಖರೀದಿಗೆ ಇನ್ಮುಂದೆ ವೈದ್ಯರ ಚೀಟಿ ಕಡ್ಡಾಯ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ನವದೆಹಲಿ: ದೇಶಾದ್ಯಂತ ಔಷಧಿಗಳ ಮಾರಾಟ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್‌ಗಳನ್ನು…

17 hours ago

ಗುಟ್ಟಾಗಿ ಮದುವೆಯಾಗಿದ್ದ ಪ್ರೇಮಿಗಳ ದುರಂತ ಅಂತ್ಯ: ಯುವತಿಯ ಕೊಲೆ ಆರೋಪದಲ್ಲಿ ಪ್ರೇಮಿ ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್…

17 hours ago

ರಾಜ್ಯಾದ್ಯಂತ ಲೋಕಾಯುಕ್ತ ಬಿಗ್ ರೇಡ್: ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರಿನಲ್ಲಿ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ದಾಳಿ

ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೃಹತ್…

17 hours ago

ಮದ್ಯದ ಅಮಲಿನಲ್ಲಿ ರೌಡಿಶೀಟರ್‌ನ ಪುಂಡಾಟ; ಪೊಲೀಸರ ಮೇಲೆಯೇ ಹಲ್ಲೆ, ಕೊಲೆ ಬೆದರಿಕೆ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್‌ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ…

18 hours ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯ ಕೊಲೆ: ಅಪಘಾತದ ನಾಟಕವಾಡಿದ ಪತಿ ಬಂಧನ

ಗೋಕಾಕ: ಅನೈತಿಕ ಸಂಬಂಧಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆಯನ್ನು ಕೊಲೆ ಮಾಡಿ, ನಂತರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ…

18 hours ago