Latest

ತಾಲೂಕಿನಾದ್ಯಂತ ಹೆಚ್ಚುತ್ತಿರುವ ಕಾಡ್ಗಿಚ್ಚು ; ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾಗುತ್ತಿರುವ ಅರಣ್ಯ..!

ಮುಂಡಗೋಡ: ಕಳೆದ 15 ದಿನಗಳಿಂದ ಕಾಡ್ಗಿಚ್ಚು ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಅಪಾರ ಪ್ರಮಾಣದ ಬೆಲೆಬಾಳುವ ಅರಣ್ಯ ನಾಶವಾಗುವುದರ ಜೊತೆಗೆ ಅರಣ್ಯದಲ್ಲಿ ವಾಸಿಸುವ ಜೀವ ಸಂಕುಲಗಳು ತಮ್ಮ ಪ್ರಾಣ ರಕ್ಷಣೆಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ.
ತಾಲೂಕಿನಲ್ಲಿ ಎರಡು ವಲಯಗಳಿದ್ದು ಮುಂಡಗೋಡ ಹಾಗೂ ಕಾತೂರು ವಲಯಗಳಾಗಿ ವಿಂಗಡಣೆಗೊಂಡಿದ್ದು ಈ ಎರಡು ವಲಯಗಳ ಗುಂಜಾವತಿ,ಕ್ಯಾತ್ಳಳ್ಳಿ, ಕಾತೂರು, ಬೆಡ್ಸಗಾಂವ್, ಸಾಲಗಾಂವ್,ಚಿಗಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಇತ್ತೀಚಿಗೆ ಅರಣ್ಯಕ್ಕೆ ಬೆಂಕಿ ಬೀಳುವ ಪ್ರಕರಣಗಳು ಹೆಚ್ಚುತ್ತಿವೆ. ಪ್ರಖರವಾದ ಬಿಸಿಲು ಮತ್ತು ಜೋರಾಗಿ ಬೀಸುತ್ತಿರುವ ಗಾಳಿಯಿಂದ ಬೆಂಕಿ ಬಹಳ ವೇಗವಾಗಿ ಹರಡುತ್ತಿದೆ ಇದರಿಂದ ಅಪಾರ ಪ್ರಮಾಣದ ಬೆಲೆಬಾಳುವ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗುತ್ತಿದೆ.
ಬೇಸಿಗೆ ಕಾಲದಲ್ಲಿ ಒಣಗಿ ನೆಲಕ್ಕೆ ಬಿದ್ದ ಎಲೆಗಳಿಗೆ ಬೆಂಕಿ ಹಚ್ಚಿ ಸುಟ್ಟರೆ ಮಳೆಗಾಲದಲ್ಲಿ ಹುಲ್ಲು ಚೆನ್ನಾಗಿ ಬೆಳೆಯುತ್ತದೆ ಇದರಿಂದ ದನ ಕರುಗಳನ್ನು ಮೇಯಿಸಲು ಅನುಕೂಲಕರ ಎನ್ನುವ ದೃಷ್ಟಿಯಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ.
ಮುನ್ನೆಚ್ಚರಿಕೆಯ ಜೊತೆ ಸಾರ್ವಜನಿಕ ತಿಳುವಳಿಕೆಯ ಅಗತ್ಯವಿದೆ: ಅರಣ್ಯಕ್ಕೆ ಬೆಂಕಿ ಹಾಕುವುದರಿಂದ ಆಗುವ ತೊಂದರೆಗಳು ಹಾಗೂ ಅದರಿಂದ ಅರಣ್ಯದಲ್ಲಿರುವ ಪ್ರಾಣಿ ಮತ್ತು ಸಸ್ಯ ಸಂಕುಲಗಳಿಗಾಗುವ ತೊಂದರೆಗಳ ಬಗ್ಗೆ ಅರಣ್ಯ ಇಲಾಖೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಜೊತೆಗೆ ಅರಣ್ಯಕ್ಕೆ ಬೆಂಕಿ ಬೀಳದಂತೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎನ್ನುತ್ತಾರೆ ಪರಿಸರ ಪ್ರೇಮಿಗಳು.
ಏನೇ ಆಗಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಈ ರೀತಿ ಅರಣ್ಯವನ್ನು ಸುಟ್ಟು ಹಾಳು ಮಾಡುವ ದುಷ್ಕೃತ್ಯವನ್ನು ಬಿಡಬೇಕಾಗಿದೆ.

ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago