Latest

ತಾಲೂಕಿನಾದ್ಯಂತ ಹೆಚ್ಚುತ್ತಿರುವ ಕಾಡ್ಗಿಚ್ಚು ; ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾಗುತ್ತಿರುವ ಅರಣ್ಯ..!

ಮುಂಡಗೋಡ: ಕಳೆದ 15 ದಿನಗಳಿಂದ ಕಾಡ್ಗಿಚ್ಚು ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಅಪಾರ ಪ್ರಮಾಣದ ಬೆಲೆಬಾಳುವ ಅರಣ್ಯ ನಾಶವಾಗುವುದರ ಜೊತೆಗೆ ಅರಣ್ಯದಲ್ಲಿ ವಾಸಿಸುವ ಜೀವ ಸಂಕುಲಗಳು ತಮ್ಮ ಪ್ರಾಣ ರಕ್ಷಣೆಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ.
ತಾಲೂಕಿನಲ್ಲಿ ಎರಡು ವಲಯಗಳಿದ್ದು ಮುಂಡಗೋಡ ಹಾಗೂ ಕಾತೂರು ವಲಯಗಳಾಗಿ ವಿಂಗಡಣೆಗೊಂಡಿದ್ದು ಈ ಎರಡು ವಲಯಗಳ ಗುಂಜಾವತಿ,ಕ್ಯಾತ್ಳಳ್ಳಿ, ಕಾತೂರು, ಬೆಡ್ಸಗಾಂವ್, ಸಾಲಗಾಂವ್,ಚಿಗಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಇತ್ತೀಚಿಗೆ ಅರಣ್ಯಕ್ಕೆ ಬೆಂಕಿ ಬೀಳುವ ಪ್ರಕರಣಗಳು ಹೆಚ್ಚುತ್ತಿವೆ. ಪ್ರಖರವಾದ ಬಿಸಿಲು ಮತ್ತು ಜೋರಾಗಿ ಬೀಸುತ್ತಿರುವ ಗಾಳಿಯಿಂದ ಬೆಂಕಿ ಬಹಳ ವೇಗವಾಗಿ ಹರಡುತ್ತಿದೆ ಇದರಿಂದ ಅಪಾರ ಪ್ರಮಾಣದ ಬೆಲೆಬಾಳುವ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗುತ್ತಿದೆ.
ಬೇಸಿಗೆ ಕಾಲದಲ್ಲಿ ಒಣಗಿ ನೆಲಕ್ಕೆ ಬಿದ್ದ ಎಲೆಗಳಿಗೆ ಬೆಂಕಿ ಹಚ್ಚಿ ಸುಟ್ಟರೆ ಮಳೆಗಾಲದಲ್ಲಿ ಹುಲ್ಲು ಚೆನ್ನಾಗಿ ಬೆಳೆಯುತ್ತದೆ ಇದರಿಂದ ದನ ಕರುಗಳನ್ನು ಮೇಯಿಸಲು ಅನುಕೂಲಕರ ಎನ್ನುವ ದೃಷ್ಟಿಯಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ.
ಮುನ್ನೆಚ್ಚರಿಕೆಯ ಜೊತೆ ಸಾರ್ವಜನಿಕ ತಿಳುವಳಿಕೆಯ ಅಗತ್ಯವಿದೆ: ಅರಣ್ಯಕ್ಕೆ ಬೆಂಕಿ ಹಾಕುವುದರಿಂದ ಆಗುವ ತೊಂದರೆಗಳು ಹಾಗೂ ಅದರಿಂದ ಅರಣ್ಯದಲ್ಲಿರುವ ಪ್ರಾಣಿ ಮತ್ತು ಸಸ್ಯ ಸಂಕುಲಗಳಿಗಾಗುವ ತೊಂದರೆಗಳ ಬಗ್ಗೆ ಅರಣ್ಯ ಇಲಾಖೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಜೊತೆಗೆ ಅರಣ್ಯಕ್ಕೆ ಬೆಂಕಿ ಬೀಳದಂತೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎನ್ನುತ್ತಾರೆ ಪರಿಸರ ಪ್ರೇಮಿಗಳು.
ಏನೇ ಆಗಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಈ ರೀತಿ ಅರಣ್ಯವನ್ನು ಸುಟ್ಟು ಹಾಳು ಮಾಡುವ ದುಷ್ಕೃತ್ಯವನ್ನು ಬಿಡಬೇಕಾಗಿದೆ.

ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

22 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

22 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

22 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

22 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

22 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

22 hours ago