Latest

ತಾಲೂಕಿನಾದ್ಯಂತ ಹೆಚ್ಚುತ್ತಿರುವ ಕಾಡ್ಗಿಚ್ಚು ; ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾಗುತ್ತಿರುವ ಅರಣ್ಯ..!

ಮುಂಡಗೋಡ: ಕಳೆದ 15 ದಿನಗಳಿಂದ ಕಾಡ್ಗಿಚ್ಚು ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಅಪಾರ ಪ್ರಮಾಣದ ಬೆಲೆಬಾಳುವ ಅರಣ್ಯ ನಾಶವಾಗುವುದರ ಜೊತೆಗೆ ಅರಣ್ಯದಲ್ಲಿ ವಾಸಿಸುವ ಜೀವ ಸಂಕುಲಗಳು ತಮ್ಮ ಪ್ರಾಣ ರಕ್ಷಣೆಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ.
ತಾಲೂಕಿನಲ್ಲಿ ಎರಡು ವಲಯಗಳಿದ್ದು ಮುಂಡಗೋಡ ಹಾಗೂ ಕಾತೂರು ವಲಯಗಳಾಗಿ ವಿಂಗಡಣೆಗೊಂಡಿದ್ದು ಈ ಎರಡು ವಲಯಗಳ ಗುಂಜಾವತಿ,ಕ್ಯಾತ್ಳಳ್ಳಿ, ಕಾತೂರು, ಬೆಡ್ಸಗಾಂವ್, ಸಾಲಗಾಂವ್,ಚಿಗಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಇತ್ತೀಚಿಗೆ ಅರಣ್ಯಕ್ಕೆ ಬೆಂಕಿ ಬೀಳುವ ಪ್ರಕರಣಗಳು ಹೆಚ್ಚುತ್ತಿವೆ. ಪ್ರಖರವಾದ ಬಿಸಿಲು ಮತ್ತು ಜೋರಾಗಿ ಬೀಸುತ್ತಿರುವ ಗಾಳಿಯಿಂದ ಬೆಂಕಿ ಬಹಳ ವೇಗವಾಗಿ ಹರಡುತ್ತಿದೆ ಇದರಿಂದ ಅಪಾರ ಪ್ರಮಾಣದ ಬೆಲೆಬಾಳುವ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗುತ್ತಿದೆ.
ಬೇಸಿಗೆ ಕಾಲದಲ್ಲಿ ಒಣಗಿ ನೆಲಕ್ಕೆ ಬಿದ್ದ ಎಲೆಗಳಿಗೆ ಬೆಂಕಿ ಹಚ್ಚಿ ಸುಟ್ಟರೆ ಮಳೆಗಾಲದಲ್ಲಿ ಹುಲ್ಲು ಚೆನ್ನಾಗಿ ಬೆಳೆಯುತ್ತದೆ ಇದರಿಂದ ದನ ಕರುಗಳನ್ನು ಮೇಯಿಸಲು ಅನುಕೂಲಕರ ಎನ್ನುವ ದೃಷ್ಟಿಯಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ.
ಮುನ್ನೆಚ್ಚರಿಕೆಯ ಜೊತೆ ಸಾರ್ವಜನಿಕ ತಿಳುವಳಿಕೆಯ ಅಗತ್ಯವಿದೆ: ಅರಣ್ಯಕ್ಕೆ ಬೆಂಕಿ ಹಾಕುವುದರಿಂದ ಆಗುವ ತೊಂದರೆಗಳು ಹಾಗೂ ಅದರಿಂದ ಅರಣ್ಯದಲ್ಲಿರುವ ಪ್ರಾಣಿ ಮತ್ತು ಸಸ್ಯ ಸಂಕುಲಗಳಿಗಾಗುವ ತೊಂದರೆಗಳ ಬಗ್ಗೆ ಅರಣ್ಯ ಇಲಾಖೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಜೊತೆಗೆ ಅರಣ್ಯಕ್ಕೆ ಬೆಂಕಿ ಬೀಳದಂತೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎನ್ನುತ್ತಾರೆ ಪರಿಸರ ಪ್ರೇಮಿಗಳು.
ಏನೇ ಆಗಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಈ ರೀತಿ ಅರಣ್ಯವನ್ನು ಸುಟ್ಟು ಹಾಳು ಮಾಡುವ ದುಷ್ಕೃತ್ಯವನ್ನು ಬಿಡಬೇಕಾಗಿದೆ.

ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

4 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

4 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

4 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

4 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

9 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

9 hours ago