Latest

ಟೆರೆಸ್‌ನಲ್ಲಿ ಅಸಭ್ಯ ಕೃತ್ಯ: ಯುವತಿಯ ಎದುರು ಹಸ್ತಮೈಥುನ ಮಾಡಿ ಕಿರುಕುಳ ನೀಡಿದ ವ್ಯಕ್ತಿ”

ಬೆಂಗಳೂರು: ಯುವತಿಯೊಬ್ಬಳಿಗೆ ಬೇರೊಬ್ಬ ವ್ಯಕ್ತಿಯ ಅಸಭ್ಯ ವರ್ತನೆಯಿಂದ ತೀವ್ರ ಆಘಾತವಾಗಿದೆ. ತನ್ನ ಮನೆಯಿಂದ ಪಕ್ಕದ ಕಟ್ಟಡದ ಟೆರೆಸ್ ಕಡೆ ನೋಡುವಾಗ, ಅಲ್ಲಿ ನಿಂತು ಆ ವ್ಯಕ್ತಿ ಜಿಪ್‌ ತೆರೆದು ಹಸ್ತಮೈಥುನ ಮಾಡುತ್ತಿದ್ದಾನೆ ಎಂಬ ಭೀಕರ ಅನುಭವವನ್ನು ಯುವತಿ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾಳೆ.

‘NSFW’ ಎಂಬ ಬಳಕೆದಾರ ಹೆಸರಿನಿಂದ ಯುವತಿ ಈ ಕುರಿತು ವಿಡಿಯೋ ಸಹಿತ ಒಂದು ಪೋಸ್ಟ್ ಹಾಕಿದ್ದು, “ಈ ವ್ಯಕ್ತಿ ನನ್ನ ಮುಂದೆಯೇ ಇಂತಹ ಅಸಭ್ಯ ವರ್ತನೆ ನಡೆಸಿದ. ನಾನು ಶಾಕ್‌ಗೆ ಒಳಗಾದೆ. ಅಸಹ್ಯವಾಯಿತು, ಹೆದರಿದೆ, ಏನು ಮಾಡಬೇಕೆಂದು ತಿಳಿಯದಂತಾಯಿತು. ಇಂತಹ ಸಂದರ್ಭದಲ್ಲೇನಾದರೂ ಸರಿಯಾದ, ಸುರಕ್ಷಿತ ಮಾರ್ಗವಿದ್ದರೆ ದಯವಿಟ್ಟು ತಿಳಿಸಿ” ಎಂದು ಬೇಸರ ವ್ಯಕ್ತಪಡಿಸಿದ್ದಾಳೆ.

ಆದರೆ, ಈ ವಿಡಿಯೋ ಹಂಚಿಕೊಂಡಿದ್ದಕ್ಕಾಗಿ ಯುವತಿಯ ರೆಡ್ಡಿಟ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆತಂಕ ವ್ಯಕ್ತಪಡಿಸಿದ ಅವರು, “ನನಗೆ ಈಗಾಗಿ ಇನ್ನಷ್ಟು ಭಯವಾಗಿದೆ. ನನ್ನ ಸುರಕ್ಷತೆಯ ಬಗ್ಗೆ ಆತಂಕವಿದೆ” ಎಂದು ಮತ್ತೊಮ್ಮೆ ಹೇಳಿದ್ದಾರೆ.

ಈ ಪೋಸ್ಟ್‌ ವೈರಲ್ ಆದ ನಂತರ ಹಲವರು ಯುವತಿಗೆ ಧೈರ್ಯ ತುಂಬಿದ್ದಾರೆ. ಕೆಲವರು, “ಈತನ ಫೋಟೋಗಳನ್ನು ಕುಟುಂಬ ಸದಸ್ಯರು ಹಾಗೂ ಮಾಧ್ಯಮಗಳಿಗೆ ಕಳುಹಿಸಿ, ಪೊಲೀಸರಿಗೆ ದೂರು ನೀಡಿ, ಕಾನೂನು ಕ್ರಮಕ್ಕೆ ಮುಂದಾಗು” ಎಂದು ಸಲಹೆ ನೀಡಿದ್ದಾರೆ. ಇನ್ನು ಕೆಲವರು ನೇರವಾಗಿ ಎಫ್‌ಐಆರ್ ದಾಖಲಿಸಲು ಪ್ರೋತ್ಸಾಹಿಸಿದ್ದಾರೆ.

ಈ ಘಟನೆಯು ಎಲ್ಲಿ ನಡೆದಿದೆ, ಯುವತಿ ಯಾರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಆದರೆ ಈ ಘಟನೆ ಮಹಿಳೆಯರ ವಿರುದ್ಧ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬೆನ್ನಟ್ಟಿದ ಮತ್ತೊಂದು ಉದಾಹರಣೆಯಾಗಿ ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

14 minutes ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

21 minutes ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

31 minutes ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

40 minutes ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

52 minutes ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

21 hours ago