Latest

ಟೆರೆಸ್‌ನಲ್ಲಿ ಅಸಭ್ಯ ಕೃತ್ಯ: ಯುವತಿಯ ಎದುರು ಹಸ್ತಮೈಥುನ ಮಾಡಿ ಕಿರುಕುಳ ನೀಡಿದ ವ್ಯಕ್ತಿ”

ಬೆಂಗಳೂರು: ಯುವತಿಯೊಬ್ಬಳಿಗೆ ಬೇರೊಬ್ಬ ವ್ಯಕ್ತಿಯ ಅಸಭ್ಯ ವರ್ತನೆಯಿಂದ ತೀವ್ರ ಆಘಾತವಾಗಿದೆ. ತನ್ನ ಮನೆಯಿಂದ ಪಕ್ಕದ ಕಟ್ಟಡದ ಟೆರೆಸ್ ಕಡೆ ನೋಡುವಾಗ, ಅಲ್ಲಿ ನಿಂತು ಆ ವ್ಯಕ್ತಿ ಜಿಪ್‌ ತೆರೆದು ಹಸ್ತಮೈಥುನ ಮಾಡುತ್ತಿದ್ದಾನೆ ಎಂಬ ಭೀಕರ ಅನುಭವವನ್ನು ಯುವತಿ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾಳೆ.

‘NSFW’ ಎಂಬ ಬಳಕೆದಾರ ಹೆಸರಿನಿಂದ ಯುವತಿ ಈ ಕುರಿತು ವಿಡಿಯೋ ಸಹಿತ ಒಂದು ಪೋಸ್ಟ್ ಹಾಕಿದ್ದು, “ಈ ವ್ಯಕ್ತಿ ನನ್ನ ಮುಂದೆಯೇ ಇಂತಹ ಅಸಭ್ಯ ವರ್ತನೆ ನಡೆಸಿದ. ನಾನು ಶಾಕ್‌ಗೆ ಒಳಗಾದೆ. ಅಸಹ್ಯವಾಯಿತು, ಹೆದರಿದೆ, ಏನು ಮಾಡಬೇಕೆಂದು ತಿಳಿಯದಂತಾಯಿತು. ಇಂತಹ ಸಂದರ್ಭದಲ್ಲೇನಾದರೂ ಸರಿಯಾದ, ಸುರಕ್ಷಿತ ಮಾರ್ಗವಿದ್ದರೆ ದಯವಿಟ್ಟು ತಿಳಿಸಿ” ಎಂದು ಬೇಸರ ವ್ಯಕ್ತಪಡಿಸಿದ್ದಾಳೆ.

ಆದರೆ, ಈ ವಿಡಿಯೋ ಹಂಚಿಕೊಂಡಿದ್ದಕ್ಕಾಗಿ ಯುವತಿಯ ರೆಡ್ಡಿಟ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆತಂಕ ವ್ಯಕ್ತಪಡಿಸಿದ ಅವರು, “ನನಗೆ ಈಗಾಗಿ ಇನ್ನಷ್ಟು ಭಯವಾಗಿದೆ. ನನ್ನ ಸುರಕ್ಷತೆಯ ಬಗ್ಗೆ ಆತಂಕವಿದೆ” ಎಂದು ಮತ್ತೊಮ್ಮೆ ಹೇಳಿದ್ದಾರೆ.

ಈ ಪೋಸ್ಟ್‌ ವೈರಲ್ ಆದ ನಂತರ ಹಲವರು ಯುವತಿಗೆ ಧೈರ್ಯ ತುಂಬಿದ್ದಾರೆ. ಕೆಲವರು, “ಈತನ ಫೋಟೋಗಳನ್ನು ಕುಟುಂಬ ಸದಸ್ಯರು ಹಾಗೂ ಮಾಧ್ಯಮಗಳಿಗೆ ಕಳುಹಿಸಿ, ಪೊಲೀಸರಿಗೆ ದೂರು ನೀಡಿ, ಕಾನೂನು ಕ್ರಮಕ್ಕೆ ಮುಂದಾಗು” ಎಂದು ಸಲಹೆ ನೀಡಿದ್ದಾರೆ. ಇನ್ನು ಕೆಲವರು ನೇರವಾಗಿ ಎಫ್‌ಐಆರ್ ದಾಖಲಿಸಲು ಪ್ರೋತ್ಸಾಹಿಸಿದ್ದಾರೆ.

ಈ ಘಟನೆಯು ಎಲ್ಲಿ ನಡೆದಿದೆ, ಯುವತಿ ಯಾರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಆದರೆ ಈ ಘಟನೆ ಮಹಿಳೆಯರ ವಿರುದ್ಧ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬೆನ್ನಟ್ಟಿದ ಮತ್ತೊಂದು ಉದಾಹರಣೆಯಾಗಿ ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago