ಮೈಸೂರು: ಚಾಮುಂಡಿ ಬೆಟ್ಟದ ಪರಿಶುದ್ಧ ಪರಿಸರದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಹೊರ ರಾಜ್ಯದ ಕೆಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್ ಈ ಕುರಿತ ಮಾಹಿತಿ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.
ಮಹತ್ವದ ತೀರ್ಥಕ್ಷೇತ್ರವೊಂದಾದ ಚಾಮುಂಡಿ ಬೆಟ್ಟದಲ್ಲಿ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿಯೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದ ದೃಶ್ಯವನ್ನು ನೋಡಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಕೆಲವರು ಅವರ ವರ್ತನೆಯ ಫೋಟೋಗಳನ್ನು ತೆಗೆದು, ಪೊಲೀಸರಿಗೆ ನೀಡುವ ಮೂಲಕ ದೂರು ಸಲ್ಲಿಸಿದರು.
ಮರುಕ್ಷಣದಲ್ಲೇ ಚಾಮುಂಡಿ ಬೆಟ್ಟ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು. ಪೊಲೀಸರು ಯುವಕರಿಂದ ವಿಚಾರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅಸಭ್ಯ ವರ್ತನೆ ಸಹಿಸಲಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.
ಅಂತರಂಗವಾಗಿ ಯುವಕರಿಗೆ ನಡವಳಿಕೆಯ ಮಹತ್ವದ ಕುರಿತು ತಿಳುವಳಿಕೆ ನೀಡಿದ ಪೊಲೀಸರು, ಪುನರಾವೃತ್ತಿ ಆಗದಂತೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಅವರನ್ನು ಬಿಡುಗಡೆ ಮಾಡಿದರು.
ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀರ್ಥಕ್ಷೇತ್ರಗಳಲ್ಲಿ ಶಿಸ್ತು ಮತ್ತು ಸೌಮ್ಯ ನಡವಳಿಕೆಯನ್ನು ಪಾಲಿಸುವ ಅಗತ್ಯವಿದೆ ಎಂದು ಪೊಲೀಸ್ ಇಲಾಖೆ ಮನವರಿಕೆ ಮಾಡಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…